ಕೆಲವು ವೃತ್ತಗಳಲ್ಲಿ ಸಿಗ್ನಲ್ ದೀಪಗಳೇ ಇರುವುದಿಲ್ಲ. ಇದ್ದರೂ ಸಮರ್ಪಕವಾಗಿ ಕಾರ್ಯನಿರ್ವಹಿಸುವುದಿಲ್ಲ.ಸರ್ಕಾರದ ಕಡೆಯಿಂದ ಇಷ್ಟೆಲ್ಲಾ ತಪ್ಪುಗಳು ಕಾಣಸಿಗುತ್ತವೆ. ಅವುಗಳಿಗೆ ಹೊಣೆ ಯಾರು? ಅವುಗಳಿಂದ ಆಗುವ ಸಾವು–ನೋವಿಗೆ ಯಾರಿಗೆ ಶಿಕ್ಷೆ ವಿಧಿಸಬೇಕು? ಇಷ್ಟೆಲ್ಲ ಹುಳುಕು ಇಟ್ಟುಕೊಂಡು ಜನಸಾಮಾನ್ಯರಿಗೆ ಭಾರಿ ಮೊತ್ತದ ದಂಡ ವಿಧಿಸುವುದು ನೈತಿಕವಾಗಿ ಸರಿಯೇ? ಮಿಗಿಲಾಗಿ, ದಂಡ ಹೆಚ್ಚಳವು ಭಾರಿ ಭ್ರಷ್ಟಾಚಾರಕ್ಕೂ ದಾರಿ ಮಾಡಿಕೊಡುವ ಸಾಧ್ಯತೆ ಇದೆ ಎಂಬುದು ಸರ್ಕಾರಕ್ಕೆ ಗೊತ್ತಿಲ್ಲವೇ?