ಸಾಹಿತಿಗಳು, ವಿಚಾರವಂತರ ಹತ್ಯೆಗಳನ್ನು ಖಂಡಿಸಿ, ತಮಗೆ ಸಂದ ಪ್ರಶಸ್ತಿಗಳನ್ನು ದೇಶದಾದ್ಯಂತ ಹಿಂದಿರುಗಿಸಿದ ವಿದ್ಯಮಾನ ಈ ಹಿಂದೆನಡೆದಿತ್ತು. ಆಳುವ ಮಂದಿ ಅದಕ್ಕೆ ಕ್ಯಾರೇ ಅಂದಿರಲಿಲ್ಲ. ಬದಲಿಗೆ ಅವರನ್ನು ‘ಅವಾರ್ಡ್ ವಾಪ್ಸಿ ಗ್ಯಾಂಗ್’ ಎಂದು ಅಪಹಾಸ್ಯ ಮಾಡಲಾಯಿತು. ಈಗ, ಒಬ್ಬ ಸೃಜನಶೀಲ ವ್ಯಕ್ತಿ ಪ್ರಶಸ್ತಿಗಾಗಿ ಸಂಭ್ರಮಿಸದೆ ತನ್ನ ಇತರ ದೇಶವಾಸಿಗಳಿಗೆ ಆಗುತ್ತಿರುವ ನೋವಿಗೆ ಸ್ಪಂದಿಸುತ್ತ, ಇನ್ನೂ ಒಂದು ಹೆಜ್ಜೆ ಮುಂದಿರಿಸಿ (ಅಥವಾ ಹಿಂದಿರಿಸಿ) ‘ಇದು ಪ್ರತಿಭಟನೆಯಲ್ಲ, ವ್ಯಥೆ’ ಎಂದಿದ್ದಾರೆ. ಯಾವುದೇ ಪ್ರತಿಭಟನೆಗೆ ಸೊಪ್ಪು ಹಾಕದ, ಮಿಗಿಲಾಗಿ ಅದನ್ನು ಹೊಸಕಿ ಹಾಕುವ ಮನಃಸ್ಥಿತಿಯ, ಸಂವೇದನೆಯೇ ಇಲ್ಲದ ಕೇಂದ್ರ ಸರ್ಕಾರಕ್ಕೆ ಈ ಪ್ರತಿಭಟನೆಯ ವ್ಯಥೆ ತಿಳಿಯುವುದೇ? ಹಾಡುಹಕ್ಕಿಯ ಗೋಳು ಕೇಳುವವರಾರು!