ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಪರಿಶಿಷ್ಟ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್: ತಡೆ ಸಲ್ಲದು

Last Updated 11 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಅತ್ಯುನ್ನತ ಶ್ರೇಣಿಯಲ್ಲಿ ಪಾಸಾದ ಪರಿಶಿಷ್ಟ ಜಾತಿಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮೆರಿಟ್ ಸ್ಕಾಲರ್‌ಶಿಪ್ ದೊರೆಯುತ್ತಿತ್ತು. ಆದರೆ, ಈ ವಿದ್ಯಾರ್ಥಿಗಳು ಪದವಿ ತರಗತಿಯ ಪ್ರವೇಶ ಪಡೆದಿದ್ದರೂ ಇದುವರೆಗೆ ಈ ಸ್ಕಾಲರ್‌ಶಿಪ್ ದೊರೆತಿಲ್ಲ.

ಎರಡು ವರ್ಷಗಳಿಂದ ಈ ಸ್ಕಾಲರ್‌ಶಿಪ್ ಅನ್ನು ಕೆಲವರಿಗೆ ನೀಡಿದರೆ, ಮತ್ತೆ ಕೆಲವರಿಗೆ ತಡೆಹಿಡಿಯಲಾಗುತ್ತಿದೆ. ಈ ಬಗ್ಗೆ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ ಬಜೆಟ್ ಕೊರತೆಯ ನೆಪ ಹೇಳುತ್ತಿದ್ದಾರೆ. ಪತ್ರಿಕೆಗಳಲ್ಲಿ ದೊಡ್ಡ ಜಾಹೀರಾತುಗಳನ್ನು ನೀಡಿ, ಪರಿಶಿಷ್ಟ ವಿದ್ಯಾರ್ಥಿಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದೇವೆ ಎನ್ನುತ್ತದೆ ಸರ್ಕಾರ. ಆದರೆ ಮೆರಿಟ್ ಸ್ಕಾಲರ್‌ಶಿಪ್ ನೀಡಲು ಇರುವ ನಿಜವಾದ ಅಡೆತಡೆಗಳಾದರೂ ಏನು?

-ಡಾ. ಎ.ಆರ್.ಗೋವಿಂದಸ್ವಾಮಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT