ಹೊರ ರಾಜ್ಯಗಳ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನ ನೀಡದಿರುವುದು ದುರದೃಷ್ಟಕರ. ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಈ ಸಮುದಾಯಗಳ ವಿದ್ಯಾರ್ಥಿಗಳು ಹೊರ ರಾಜ್ಯಗಳ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುವುದೇ ದೊಡ್ಡ ಸವಾಲಾಗಿರುತ್ತದೆ. ರಾಜ್ಯದ ಅನೇಕ ವಿದ್ಯಾರ್ಥಿಗಳು ಇಂತಹ ಸವಾಲನ್ನು ಎದುರಿಸುತ್ತಿದ್ದಾರೆ.