ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶುಲ್ಕ ಗೊಂದಲ: ಅನಗತ್ಯ ಗುದ್ದಾಟ

Last Updated 15 ಜೂನ್ 2021, 19:31 IST
ಅಕ್ಷರ ಗಾತ್ರ

ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಸರ್ಕಾರ ಹಾಗೂ ಪೋಷಕರ ನಡುವಿನ ಶುಲ್ಕ ಗೊಂದಲದ ಗುದ್ದಾಟದಲ್ಲಿ ಶಿಕ್ಷಕರು ಬಡವಾಗುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಕೊರೊನಾ ಕಾರಣದಿಂದ ಬಹುತೇಕ ಖಾಸಗಿ ಶಾಲೆಗಳು ಶಿಕ್ಷಕರ ಸಂಖ್ಯೆಯನ್ನು ಶೇ 50ಕ್ಕಿಂತ ಕಡಿಮೆ ಮಾಡಿರುವುದಲ್ಲದೆ, ಸಂಬಳದಲ್ಲೂ ಕಡಿತ ಮಾಡಿವೆ.

ಶಾಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡಲು ಶ್ರಮಿಸುವ ಶಿಕ್ಷಕರ ಬಗ್ಗೆ ಯಾರೂ ಯೋಚಿಸುತ್ತಿಲ್ಲ. ಇಲ್ಲಿ ಸರ್ಕಾರವು ಖಾಸಗಿ ಶಾಲೆಗಳ ಶುಲ್ಕದ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದರ ಬದಲು, ಆಯಾ ಶಾಲಾ ಸಿಬ್ಬಂದಿಗೆ ಕಾಲಕಾಲಕ್ಕೆ ಸಂಬಳ ಸಿಗುವಂತೆ ಮಾಡಲಿ. ಅವರ ಆರೋಗ್ಯದ ಬಗೆಗೆ ಕಾಳಜಿ ವಹಿಸಲಿ. ಯಾರಾದರೂ ಅಕಾಲಿಕವಾಗಿ ಮರಣ ಹೊಂದಿದರೆ ಅವರ ಮಕ್ಕಳ ಭವಿಷ್ಯದ ಶಿಕ್ಷಣಕ್ಕೆ ನೆರವಾಗುವ ರೀತಿಯಲ್ಲಿ ಮಾನದಂಡ
ಗಳನ್ನು ರೂಪಿಸಿ ಕಡ್ಡಾಯವಾಗಿ ಪಾಲಿಸುವಂತೆ ಆದೇಶಿಸಲಿ. ಆಗ ಬಡಪಾಯಿ ಶಿಕ್ಷಕರನ್ನು ನಂಬಿರುವ ಕುಟುಂಬಗಳಿಗೆ ಆಸರೆಯಾದೀತು. ಅದು ಬಿಟ್ಟು, ಬಹುತೇಕ ಉಳ್ಳವರೇ ತಮ್ಮ ಮಕ್ಕಳನ್ನು ಸೇರಿಸುವ ಶಾಲೆಗಳ ಶುಲ್ಕದ ಬಗ್ಗೆ ಅನಗತ್ಯ ಗುದ್ದಾಟ ಬೇಡ.

- ಶಿವಕುಮಾರ್ ಯರಗಟ್ಟಿಹಳ್ಳಿ,ಚನ್ನಗಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT