<p>ದೇಶದ್ರೋಹಕ್ಕೆ ಸಂಬಂಧಿಸಿದ ಶಿಕ್ಷೆಗೆ ಗುರಿಪಡಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) 124 (ಎ) ಸೆಕ್ಷನ್ ಅನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿರುವುದು ಸ್ವಾಗತಾರ್ಹ ನಡೆ. ಬ್ರಿಟಿಷ್ ಸರ್ಕಾರ ಜಾರಿಗೆ ತಂದಿದ್ದ ಈ ಕಾನೂನಿನ ದುರ್ಬಳಕೆ ಆಳುವ ಸರ್ಕಾರದಿಂದ ಆಗುತ್ತಲೇ ಇದೆ. ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ಈ ಸೆಕ್ಷನ್ ಬಳಸಿಕೊಂಡು<br />ಹತ್ತಿಕ್ಕಲಾಗುತ್ತಿದೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದೆ. ಹಲವು ರಾಷ್ಟ್ರಗಳು ಈಗಾಗಲೇ ಈ ಬಗೆಯ ಕಾನೂನನ್ನು ರದ್ದುಪಡಿಸಿವೆ.</p>.<p>ಕಳೆದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಈ ಕಾನೂನನ್ನು ರದ್ದು ಮಾಡುವುದಾಗಿ ಘೋಷಿಸಿತ್ತು. ಅದನ್ನು ಇನ್ನುಳಿದ ಪಕ್ಷಗಳು ದೇಶದಲ್ಲಿ ಅರಾಜಕತೆಗೆ ಅವಕಾಶ ಮತ್ತು ಭಯೋತ್ಪಾದಕರಿಗೆ ಆಹ್ವಾನ ಕೊಟ್ಟಂತೆ ಎಂದು ಬಿಂಬಿಸಿ ಲಾಭ ಪಡೆದವು. ಆಡಳಿತಾರೂಢ ಬಿಜೆಪಿಯು ಕೆಲವು ಹಳೆಯ ಕಾನೂನುಗಳನ್ನು ರದ್ದುಪಡಿಸುವುದಾಗಿ ಹೇಳಿದ್ದರೂ ಓಬೀರಾಯನ ಕಾಲದ ಈ ಸೆಕ್ಷನ್ ರದ್ದುಗೊಳಿಸುವ ಬಗ್ಗೆ ಜಾಣಮೌನ ವಹಿಸಿದೆ. ಈಗ ಯಾವ ಪಕ್ಷವೂ ಈ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಕಾರಣ ತಮ್ಮ ಪಕ್ಷದ ಧುರೀಣರ ಬಂಧನವಾದಾಗ ಮಾತ್ರ ಅಬ್ಬರಿಸುವ ರಾಜಕೀಯ ಪಕ್ಷಗಳು ಜನಸಾಮಾನ್ಯರ ಕಷ್ಟಕ್ಕೆ ಓಗೊಡುವುದು ಕಡಿಮೆ. ಇಂತಹ ಸಮಯದಲ್ಲಿ ನ್ಯಾಯಾಲಯವು ಪರಾಮರ್ಶಿಸಿ ಸ್ವಾಗತಾರ್ಹ ತೀರ್ಪು ನೀಡಲಿ ಎಂದು ಆಶಿಸೋಣ.</p>.<p><em><strong>- ಗಣಪತಿ ನಾಯ್ಕ್,ಕಾನಗೋಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೇಶದ್ರೋಹಕ್ಕೆ ಸಂಬಂಧಿಸಿದ ಶಿಕ್ಷೆಗೆ ಗುರಿಪಡಿಸುವ ಭಾರತೀಯ ದಂಡ ಸಂಹಿತೆಯ (ಐಪಿಸಿ) 124 (ಎ) ಸೆಕ್ಷನ್ ಅನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ಸೂಚಿಸಿರುವುದು ಸ್ವಾಗತಾರ್ಹ ನಡೆ. ಬ್ರಿಟಿಷ್ ಸರ್ಕಾರ ಜಾರಿಗೆ ತಂದಿದ್ದ ಈ ಕಾನೂನಿನ ದುರ್ಬಳಕೆ ಆಳುವ ಸರ್ಕಾರದಿಂದ ಆಗುತ್ತಲೇ ಇದೆ. ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳನ್ನು ಎತ್ತಿಹಿಡಿಯುವ ಪ್ರಯತ್ನಗಳನ್ನು ಈ ಸೆಕ್ಷನ್ ಬಳಸಿಕೊಂಡು<br />ಹತ್ತಿಕ್ಕಲಾಗುತ್ತಿದೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಲಾಗುತ್ತಿದೆ. ಹಲವು ರಾಷ್ಟ್ರಗಳು ಈಗಾಗಲೇ ಈ ಬಗೆಯ ಕಾನೂನನ್ನು ರದ್ದುಪಡಿಸಿವೆ.</p>.<p>ಕಳೆದ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಈ ಕಾನೂನನ್ನು ರದ್ದು ಮಾಡುವುದಾಗಿ ಘೋಷಿಸಿತ್ತು. ಅದನ್ನು ಇನ್ನುಳಿದ ಪಕ್ಷಗಳು ದೇಶದಲ್ಲಿ ಅರಾಜಕತೆಗೆ ಅವಕಾಶ ಮತ್ತು ಭಯೋತ್ಪಾದಕರಿಗೆ ಆಹ್ವಾನ ಕೊಟ್ಟಂತೆ ಎಂದು ಬಿಂಬಿಸಿ ಲಾಭ ಪಡೆದವು. ಆಡಳಿತಾರೂಢ ಬಿಜೆಪಿಯು ಕೆಲವು ಹಳೆಯ ಕಾನೂನುಗಳನ್ನು ರದ್ದುಪಡಿಸುವುದಾಗಿ ಹೇಳಿದ್ದರೂ ಓಬೀರಾಯನ ಕಾಲದ ಈ ಸೆಕ್ಷನ್ ರದ್ದುಗೊಳಿಸುವ ಬಗ್ಗೆ ಜಾಣಮೌನ ವಹಿಸಿದೆ. ಈಗ ಯಾವ ಪಕ್ಷವೂ ಈ ಬಗ್ಗೆ ಸೊಲ್ಲೆತ್ತುತ್ತಿಲ್ಲ. ಕಾರಣ ತಮ್ಮ ಪಕ್ಷದ ಧುರೀಣರ ಬಂಧನವಾದಾಗ ಮಾತ್ರ ಅಬ್ಬರಿಸುವ ರಾಜಕೀಯ ಪಕ್ಷಗಳು ಜನಸಾಮಾನ್ಯರ ಕಷ್ಟಕ್ಕೆ ಓಗೊಡುವುದು ಕಡಿಮೆ. ಇಂತಹ ಸಮಯದಲ್ಲಿ ನ್ಯಾಯಾಲಯವು ಪರಾಮರ್ಶಿಸಿ ಸ್ವಾಗತಾರ್ಹ ತೀರ್ಪು ನೀಡಲಿ ಎಂದು ಆಶಿಸೋಣ.</p>.<p><em><strong>- ಗಣಪತಿ ನಾಯ್ಕ್,ಕಾನಗೋಡ</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>