ನಮ್ಮ ರೈತರು ಎದುರಿಸುತ್ತಿರುವ ವಿವಿಧ ಸವಾಲುಗಳಲ್ಲಿ, ಸಮಯಕ್ಕೆ ಸರಿಯಾಗಿ ಬಿತ್ತನೆ ಬೀಜಗಳು ಸಿಗದಿರುವುದೂ ಒಂದು. ಪ್ರತಿವರ್ಷ ಈ ಸಮಸ್ಯೆ ಇದ್ದೇ ಇರುತ್ತದೆ. ಬಿತ್ತನೆ ಬೀಜ ಪಡೆಯಲು ಉದ್ದನೆಯ ಸರತಿ ಸಾಲಿನಲ್ಲಿ ನಿಂತು ಕಾಯುವ ಅವರ ಪರಿಸ್ಥಿತಿ ವರ್ಷಗಳಿಂದಲೂ ಬದಲಾಗಿಲ್ಲ. ಈಗ ಕೃಷಿ ಚಟುವಟಿಕೆ ಗರಿಗೆದರಿದೆ. ಆದರೆ ಅನೇಕ ಜಿಲ್ಲೆಗಳಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಿಗದ ಕಾರಣ, ಹದ ಮಾಡಿದ ಜಮೀನನ್ನು ಖಾಲಿ ಬಿಡಬೇಕಾದ ಪರಿಸ್ಥಿತಿ ಉಂಟಾಗಿದೆ. ಸರ್ಕಾರವು ಬೀಜ ತಯಾರಕ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು, ಪ್ರತೀ ತಾಲ್ಲೂಕು ಮಟ್ಟದಲ್ಲಿ ಬೀಜ ಬ್ಯಾಂಕ್ಗಳನ್ನು ಸ್ಥಾಪಿಸಬೇಕು. ಜೊತೆಗೆ, ಸಣ್ಣ ರೈತರಿಗೆ ಉತ್ತಮ ಗುಣಮಟ್ಟದ ಬೀಜಗಳನ್ನು ಸರಿಯಾದ ಸಮಯದಲ್ಲಿ ಸಮಂಜಸವಾದ ಬೆಲೆಯಲ್ಲಿ ಒದಗಿಸಲು ಕ್ರಮ ಕೈಗೊಳ್ಳಬೇಕು.