ಸುಸ್ಥಿರ ಅಭಿವೃದ್ಧಿಗಾಗಿ ಒಂದು ಭೂಪ್ರದೇಶವು ಶೇಕಡ 33ರಷ್ಟು ಅರಣ್ಯ ಪ್ರದೇಶವನ್ನು ಹೊಂದಿರಬೇಕು. ಇಲ್ಲದಿದ್ದರೆ ಕೊಡಗಿನಲ್ಲಿ ನಡೆದಂತಹ ಪ್ರಾಕೃತಿಕ ದುರಂತ ಇತರ ಪ್ರದೇಶಗಳಲ್ಲೂ ಸಂಭವಿಸುತ್ತದೆ. ಕರ್ನಾಟಕದಲ್ಲಿರುವುದು ಶೇ 9ರಷ್ಟು ಅರಣ್ಯ ಮಾತ್ರ. ಇದರಿಂದಾಗಿ ಕರ್ನಾಟಕದಲ್ಲಿ ಬರದ ಸಮಸ್ಯೆ ಉಲ್ಬಣಿಸಿದೆ. ಇಂತಹ ಸಂದರ್ಭದಲ್ಲಿ ಎರಡು ಲಕ್ಷ ಮರಗಳು ಕಣ್ಮರೆಯಾಗುವ ಮತ್ತು ನೇತ್ರಾವತಿ, ಮೃತ್ಯುಂಜಯ ಮತ್ತು ಕಪಿಲಾ ನದಿಗಳ ಮೇಲೆ ಪರಿಣಾಮ ಬೀರುವ ಶಿಶಿಲ-ಭೈರಾಪುರ ಯೋಜನೆಯ ಅನುಷ್ಠಾನದ ಪ್ರಯತ್ನ ನಡೆದಿದೆ. ಇದು, ವಿವೇಕಯುತವೇ?