ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಶಿಲ–ಭೈರಾಪುರ ರಸ್ತೆ ಯೋಜನೆ ವಿವೇಕಯುತವೇ?

Last Updated 9 ಏಪ್ರಿಲ್ 2019, 20:01 IST
ಅಕ್ಷರ ಗಾತ್ರ

ಚಿಕ್ಕಮಗಳೂರು ಜಿಲ್ಲೆಯ ಭೈರಾಪುರವನ್ನು ದಕ್ಷಿಣ ಕನ್ನಡ ಜಿಲ್ಲೆಯ ಶಿಶಿಲದೊಡನೆ ಸಂಪರ್ಕಿಸುವ ಹೆದ್ದಾರಿಯೊಂದರ ರಚನೆಯ ಬಗ್ಗೆ ಆರಂಭಿಕ ಸರ್ವೆ ಕಾರ್ಯ ನಡೆದಿದೆ. ಬಹುಸೂಕ್ಷ್ಮ ಪರಿಸರ ಪ್ರದೇಶದಲ್ಲಿ ಹಾದು ಹೋಗುವ ಈ ರಸ್ತೆ ಅನೇಕ ಆತಂಕಗಳನ್ನು ಸೃಷ್ಟಿಸಿದೆ.

ಸುಸ್ಥಿರ ಅಭಿವೃದ್ಧಿಗಾಗಿ ಒಂದು ಭೂಪ್ರದೇಶವು ಶೇಕಡ 33ರಷ್ಟು ಅರಣ್ಯ ಪ್ರದೇಶವನ್ನು ಹೊಂದಿರಬೇಕು. ಇಲ್ಲದಿದ್ದರೆ ಕೊಡಗಿನಲ್ಲಿ ನಡೆದಂತಹ ಪ್ರಾಕೃತಿಕ ದುರಂತ ಇತರ ಪ್ರದೇಶಗಳಲ್ಲೂ ಸಂಭವಿಸುತ್ತದೆ. ಕರ್ನಾಟಕದಲ್ಲಿರುವುದು ಶೇ 9ರಷ್ಟು ಅರಣ್ಯ ಮಾತ್ರ. ಇದರಿಂದಾಗಿ ಕರ್ನಾಟಕದಲ್ಲಿ ಬರದ ಸಮಸ್ಯೆ ಉಲ್ಬಣಿಸಿದೆ. ಇಂತಹ ಸಂದರ್ಭದಲ್ಲಿ ಎರಡು ಲಕ್ಷ ಮರಗಳು ಕಣ್ಮರೆಯಾಗುವ ಮತ್ತು ನೇತ್ರಾವತಿ, ಮೃತ್ಯುಂಜಯ ಮತ್ತು ಕಪಿಲಾ ನದಿಗಳ ಮೇಲೆ ಪರಿಣಾಮ ಬೀರುವ ಶಿಶಿಲ-ಭೈರಾಪುರ ಯೋಜನೆಯ ಅನುಷ್ಠಾನದ ಪ್ರಯತ್ನ ನಡೆದಿದೆ. ಇದು, ವಿವೇಕಯುತವೇ?

ಈ ಯೋಜನೆಯ ನೇರ ಪರಿಣಾಮವೆಂದರೆ ಕಪಿಲಾ ನದಿ ಸಂಪೂರ್ಣ ಬತ್ತಿ ಹೋಗಿ ಅಪೂರ್ವ ಮೆಹಶೀರ್ ಮತ್ಸ್ಯ ಸಂತತಿ ಸರ್ವನಾಶವಾಗುವುದು. ಈಗಾಗಲೇ ಎತ್ತಿನಹೊಳೆ ಯೋಜನೆಯಿಂದಾಗಿ ನೇತ್ರಾವತಿ ಬತ್ತುತ್ತಿದೆ. ಕಪಿಲಾ ನದಿಯೂ ಬತ್ತಿ ಹೋದರೆ ಮಂಗಳೂರಿಗೆ ನೀರೇ ಇಲ್ಲದಂತಾಗುತ್ತದೆ. ಶಿಶಿಲ-ಭೈರಾಪುರ ರಸ್ತೆ ಆರ್ಥಿಕವಾಗಿಯೂ ಲಾಭದಾಯಕವೇನಲ್ಲ. ಅದರ ಬದಲು ಚಾರ್ಮಾಡಿ ರಸ್ತೆಯನ್ನು ವೈಜ್ಞಾನಿಕವಾಗಿ ವಿಸ್ತರಿಸಿದರೆ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಪರಿಸರ ಉಳಿದುಕೊಳ್ಳುತ್ತದೆ. ಗಾಡ್ಗೀಳ್ ಸಮಿತಿ ವರದಿಯನ್ನು ಕಡೆಗಣಿಸಿ ಈ ವಿನಾಶಕಾರಿ ಯೋಜನೆ ಅನುಷ್ಠಾನಕ್ಕೆ ಬಾರದಂತೆ ನೋಡಿಕೊಳ್ಳಬೇಕಾದದ್ದು ನಮ್ಮೆಲ್ಲರ ಹೊಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT