<p>ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಬಿಗಿಗೊಳಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದಾರೆ. ಬಲಿಷ್ಠ ಆಡಳಿತ ಪಕ್ಷವು ಪ್ರಾದೇಶಿಕ ಪಕ್ಷಗಳನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ನಿರ್ಮೂಲನೆ ಮಾಡಲು ಹಟ ತೊಟ್ಟಂತೆ ಪರೋಕ್ಷವಾಗಿ ಆಪರೇಷನ್ ಕಮಲ ಮಾಡಹೊರಟಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಮುಂದೊಂದು ದಿನ ತನಗೇ ಇದು ತಿರುಗುಬಾಣ ಆಗಬಹುದು.</p>.<p>ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಮುಂದಿನ ಭೀಕರತೆಯನ್ನು ತೋರಿಸುತ್ತಿವೆ. ಒಂದು ಪಕ್ಷದಿಂದ ಆರಿಸಿಬಂದ ಜನಪ್ರತಿನಿಧಿಯು ಪಕ್ಷನಿಷ್ಠೆ ಮರೆತು ಅಧಿಕಾರದಾಹಕ್ಕಾಗಿ ಇನ್ನೊಂದು ಪಕ್ಷಕ್ಕೆ ಹಾರುವುದನ್ನು ತಪ್ಪಿಸಬೇಕು. ಚುನಾವಣೆಗೆ ಮೊದಲು ಪಕ್ಷ ತೊರೆಯಲಿ, ಆದರೆ ಗೆದ್ದ ನಂತರ ತಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಜನರಿಗೆ, ಪಕ್ಷಕ್ಕೆ ನಂಬಿಕೆದ್ರೋಹ ಮಾಡುವುದು ಉಚಿತವಲ್ಲ.</p>.<p><strong>-ಮಲ್ಲತ್ತಹಳ್ಳಿ ಡಾ.ಎಚ್.ತುಕಾರಾಂ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಕ್ಷಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಬಿಗಿಗೊಳಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಇತ್ತೀಚೆಗೆ ಅಭಿಪ್ರಾಯಪಟ್ಟಿದ್ದಾರೆ. ಬಲಿಷ್ಠ ಆಡಳಿತ ಪಕ್ಷವು ಪ್ರಾದೇಶಿಕ ಪಕ್ಷಗಳನ್ನು ಮತ್ತು ಕಾಂಗ್ರೆಸ್ ಪಕ್ಷವನ್ನು ನಿರ್ಮೂಲನೆ ಮಾಡಲು ಹಟ ತೊಟ್ಟಂತೆ ಪರೋಕ್ಷವಾಗಿ ಆಪರೇಷನ್ ಕಮಲ ಮಾಡಹೊರಟಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಮುಂದೊಂದು ದಿನ ತನಗೇ ಇದು ತಿರುಗುಬಾಣ ಆಗಬಹುದು.</p>.<p>ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ವಿದ್ಯಮಾನಗಳು ಮುಂದಿನ ಭೀಕರತೆಯನ್ನು ತೋರಿಸುತ್ತಿವೆ. ಒಂದು ಪಕ್ಷದಿಂದ ಆರಿಸಿಬಂದ ಜನಪ್ರತಿನಿಧಿಯು ಪಕ್ಷನಿಷ್ಠೆ ಮರೆತು ಅಧಿಕಾರದಾಹಕ್ಕಾಗಿ ಇನ್ನೊಂದು ಪಕ್ಷಕ್ಕೆ ಹಾರುವುದನ್ನು ತಪ್ಪಿಸಬೇಕು. ಚುನಾವಣೆಗೆ ಮೊದಲು ಪಕ್ಷ ತೊರೆಯಲಿ, ಆದರೆ ಗೆದ್ದ ನಂತರ ತಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಜನರಿಗೆ, ಪಕ್ಷಕ್ಕೆ ನಂಬಿಕೆದ್ರೋಹ ಮಾಡುವುದು ಉಚಿತವಲ್ಲ.</p>.<p><strong>-ಮಲ್ಲತ್ತಹಳ್ಳಿ ಡಾ.ಎಚ್.ತುಕಾರಾಂ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>