ಆರ್ಥಿಕವಾಗಿ ಹಿಂದುಳಿದ ‘ಮೇಲ್ಜಾತಿ ಮೀಸಲಾತಿಗೆ ಮಾನದಂಡವಿಲ್ಲ’ ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಕೃತಿ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ (ಪ್ರ.ವಾ., ಜೂನ್ 27). ನರೇಂದ್ರ ಮೋದಿ ಅವರು ಇಂಥವರಿಗೆ ಶೇ 10ರಷ್ಟು ಮೀಸಲಾತಿ ನೀಡಿದ್ದರೂ ಹಿಂದುಳಿದ ವರ್ಗದವರು ಮೌನವಾಗಿದ್ದಾರೆ ಎಂದೂ ಹೇಳಿದ್ದಾರೆ. ನಿಜ, ಸಮಾಜದ ಎಲ್ಲ ವರ್ಗಗಳಲ್ಲೂ ಬಡವರು, ಕಡುಬಡವರು ಇದ್ದಾರೆ. ಯಾರೂ ಇಂಥ ಜಾತಿಯಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿ ಬರುವುದಿಲ್ಲ. ಪ್ರಭಾವಿ ಜಾತಿಗಳಲ್ಲೂ ಆರ್ಥಿಕವಾಗಿ ತುಂಬಾ ಹಿಂದುಳಿದವರು ಇದ್ದಾರೆ ಎಂಬುದು ಕಟು ಸತ್ಯ. ಆರ್ಥಿಕ ತೊಂದರೆ ಇರುವ ಕಾರಣಕ್ಕೆ ಅಂತಹ ಜಾತಿಗಳ ನೂರಾರು ವಿದ್ಯಾರ್ಥಿಗಳು ಓದು ಮುಂದುವರಿಸಲಾರದೆ ಕೈಚೆಲ್ಲಿ ಕುಳಿತವರಿದ್ದಾರೆ.