ಯುವಕರು ಜನಜಾಗೃತಿಯ ಮೂಲಕ ಸಾಮಾಜಿಕ ಕ್ರಾಂತಿ ಸಾಧಿಸಬಹುದು, ಹೊಸ ಮೌಲ್ಯಗಳಿರುವ ನವಸಮಾಜವನ್ನು ಸೃಷ್ಟಿ ಮಾಡಬಹುದು. ಆದರೆ ನಮ್ಮ ಸಮಾಜ ನಿಂತ ನೀರಿನಂತೆ ಆಗಿದೆ, ಅನೇಕ ಸಾಮಾಜಿಕ ಕಾಯಿಲೆಗಳ ಆವಾಸಸ್ಥಾನವಾಗಿದೆ. ಸ್ವಾತಂತ್ರ್ಯ ಬಂದು 73 ವರ್ಷಗಳೇ ಗತಿಸಿದರೂ ಬಡವರು ಬಡವರಾಗಿಯೇ ಉಳಿದಿದ್ದಾರೆ. ಕೆಲವೇ ಮಂದಿ ಸಹಸ್ರಾರು ಕೋಟಿ ರೂಪಾಯಿಗಳ ಒಡೆಯರಾಗಿದ್ದಾರೆ. ಪಕ್ಷ ರಾಜಕೀಯವಂತೂ ಹೊಲಸಾಗಿದೆ. ವಿದ್ಯೆ ಮಾರಾಟದ ವಸ್ತುವಾಗಿದೆ. ಇದನ್ನೆಲ್ಲ ನಮ್ಮ ಯುವಕರು ಮೂಕಪ್ರೇಕ್ಷಕರಂತೆ ನೋಡಿಕೊಂಡು ಕುಳಿತಿದ್ದಾರೆ. ಇಂಥ ಮನೋಭಾವ ಯುವಕರಿಗೆ ತರವಲ್ಲ.