ಉದ್ದೇಶಪೂರ್ವಕವಲ್ಲದ ಹತ್ಯೆ ಆರೋಪದಡಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸಿಧು ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಚಲಮೇಶ್ವರ್ ಹಾಗೂ ಸಂಜಯ್ ಕಿಶನ್ ಕೌಲ್ ಅವರಿದ್ದ ಪೀಠ, ಹೈಕೋರ್ಟ್ ಆದೇಶ ಮರುಪರಿಶೀಲಿಸಿ ಈ ತೀರ್ಪು ನೀಡಿದೆ. ಸಿಧು ಆಪ್ತ ರೂಪಿಂದರ್ ಸಿಂಗ್ ಸಂಧು ಅವರಿಗೆ ವಿಧಿಸಿದ್ದ ಮೂರು ವರ್ಷಗಳ ಜೈಲು ಶಿಕ್ಷೆಗೂ ತಡೆ ನೀಡಿದೆ.