ಕರ್ನಾಟಕ– ಮಹಾರಾಷ್ಟ್ರ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಹೇಳಿಕೆ (ಪ್ರ.ಜಾ., ಜ. 18) ಸಂವಿಧಾನಬದ್ಧ ಸ್ಧಾನದಲ್ಲಿರುವ ಮುಖ್ಯಮಂತ್ರಿಗೆ ಶೋಭೆ ತರುವುದಿಲ್ಲ. ಎರಡೂ ರಾಜ್ಯಗಳ ನಡುವಿನ ಗಡಿ ವಿವಾದವು ಸುಪ್ರೀಂ ಕೋರ್ಟ್ನಲ್ಲಿ ಇರುವುದರಿಂದ ಈ ರೀತಿ ಕಿಡಿ ಹಚ್ಚುವ ಹೇಳಿಕೆಗಳನ್ನು ನೀಡಿದರೆ ಕೋರ್ಟ್ಗೆ ಅಗೌರವವನ್ನು ಸೂಚಿಸಿದಂತೆ. ಮಹಾನಗರಪಾಲಿಕೆ ಚುನಾವಣೆ ಹತ್ತಿರ ಬಂದಿರುವುದರಿಂದ ಅಲ್ಲಿನ ಮರಾಠಿಗರ ಭಾವನೆಗಳನ್ನು ಕೆರಳಿಸಿ ಮತಗಳನ್ನು ಸೆಳೆಯುವುದಕ್ಕೋಸ್ಕರ ಇಂತಹ ಉದ್ಧಟತನದ ಹೇಳಿಕೆಯನ್ನು ಉದ್ಧವ್ ನೀಡಿರಬಹುದು.