ಅದೇ ರೀತಿ, ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ದುರ್ಬಲವಾದ ಮತ್ತೊಂದು ವರ್ಗವೆಂದರೆ ಅಂಗವಿಕಲ ವರ್ಗ ಎಂಬುದನ್ನು ಸರ್ಕಾರ ಮರೆಯಬಾರದು. ಶಿಕ್ಷಣದಲ್ಲಿ ಪರಿಶಿಷ್ಟ ಜಾತಿ ಮತ್ತು ವರ್ಗದ ಅಭ್ಯರ್ಥಿಗಳಿಗೆ ನೀಡುವ ಸೌಲಭ್ಯಗಳಿಗೆ ಕಮ್ಮಿ ಇಲ್ಲದಂತೆ ಅಂಗವಿಕಲರಿಗೂ ಎಲ್ಲಾ ಸೌಲಭ್ಯಗಳನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗಷ್ಟೇ ಆದೇಶ ನೀಡಿದೆ. ಅದರಂತೆ, ಈಗ ಸರ್ಕಾರ ಆಯಾ ಜಿಲ್ಲೆಯಲ್ಲಿ ಅಂಗವಿಕಲ ವಿದ್ಯಾರ್ಥಿಗಳ ಪೈಕಿ ಪ್ರಥಮ ಸ್ಥಾನ ಪಡೆದವರಿಗೂ ಪ್ರೋತ್ಸಾಹಧನ ನೀಡಬೇಕು. ಈ ಮೂಲಕ ಅಂಗವಿಕಲ ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಹಾಗೂ ಅಂಗವಿಕಲ ಸಮೂಹದ ಸಬಲೀಕರಣಕ್ಕೆ ಉತ್ತೇಜನ ನೀಡಬೇಕು.