ಯೋಜನೆಯ ಅನುದಾನವನ್ನು ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಬಿಡುಗಡೆ ಮಾಡುತ್ತಿರುವುದು ಗ್ರಾಮ ಪಂಚಾಯಿತಿಯ ಕೆಲವು ಪ್ರತಿನಿಧಿಗಳಿಗೆ ವರದಾನದಂತಾಗಿದೆ. ಅವರು ಈ ಯೋಜನೆಯ ಕಾಮಗಾರಿಗಳನ್ನು ತಮಗೆ ಬೇಕಾದಂತೆ ನಿಯಂತ್ರಿಸಿ ತಮ್ಮಿಷ್ಟದ ಗುತ್ತಿಗೆದಾರರ ಅಥವಾ ಸಂಬಂಧಿಕರ ಮೂಲಕ ಇಲ್ಲವೇ ಬೇನಾಮಿ ಹೆಸರಿನಲ್ಲಿ ಗುತ್ತಿಗೆ ಮಾಡಿಸಿ, ಜಾಬ್ ಕಾರ್ಡ್ದಾರರ ಹೆಸರಿನಲ್ಲಿ ಯಂತ್ರೋಪಕರಣಗಳನ್ನು ಬಳಸಿ, ನಂತರ ಕಾರ್ಡ್ದಾರರ ಸಹಿ ಪಡೆದು, ಲೆಕ್ಕ ತೋರಿಸಿ ಲಾಭ ಪಡೆಯುತ್ತಿದ್ದಾರೆ. ಇದರ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡು, ಯೋಜನೆಯ ಸವಲತ್ತು ಫಲಾನುಭವಿಗಳಿಗೆ ಮಾತ್ರ ದೊರಕುವಂತೆ ಮಾಡಬೇಕು.