ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿವರ್ಗಕ್ಕೆ ಜವಾಬ್ದಾರಿ ಬರಲಿ

Last Updated 28 ಸೆಪ್ಟೆಂಬರ್ 2020, 15:45 IST
ಅಕ್ಷರ ಗಾತ್ರ

ಕೆಲ ದಿನಗಳ ಹಿಂದೆ ನಡೆದ ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆಯಲ್ಲಾಗಲೀ ಇತ್ತೀಚೆಗೆ ನಡೆದ ಕೆ-ಸೆಟ್ ಪರೀಕ್ಷೆಯಲ್ಲಾಗಲೀ ಅಥವಾ ಮೈಸೂರು ವಿಶ್ವವಿದ್ಯಾಲಯದ ಈಗಿನ ಪದವಿ ಪರೀಕ್ಷೆಗಳಲ್ಲಾಗಲೀ ವಿದ್ಯಾರ್ಥಿಗಳು ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿದ್ದು ಕಂಡುಬರಲಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಆರೋಗ್ಯ ಸೌಲಭ್ಯಗಳನ್ನು ಒದಗಿಸಿದರೂ ವಿದ್ಯಾರ್ಥಿಗಳು ಪರೀಕ್ಷೆ ಬರೆದ ನಂತರ ಕಾಲೇಜು, ಕ್ಯಾಂಟೀನ್ ಆವರಣದಲ್ಲಿ, ಬಸ್ ನಿಲ್ದಾಣಗಳಲ್ಲಿ ಕೊರೊನಾ ಸೋಂಕಿನ ಆತಂಕ ಇಲ್ಲದೆ ಪರಸ್ಪರ ಹಸ್ತಲಾಘವ ನೀಡುತ್ತಾ ಆಲಿಂಗನ ಮಾಡುತ್ತಾ ಕೊನೇಪಕ್ಷ ಮಾಸ್ಕ್ ಅನ್ನೂ ಹಾಕಿಕೊಳ್ಳದೆ ಓಡಾಡುತ್ತಿದ್ದರು.

ಕೊರೊನಾದ ಬಗ್ಗೆ ಅನಕ್ಷರಸ್ಥರಿಗೆ ತಿಳಿಹೇಳಬೇಕಾದ ಸುಶಿಕ್ಷಿತ ವರ್ಗವೇ ಈ ರೀತಿ ನಡೆದುಕೊಂಡರೆ ಇನ್ನು ಸಾಮಾನ್ಯ ಜನರ ಸ್ಥಿತಿ ಏನು? ವಿದ್ಯಾರ್ಥಿಗಳ ಈ ನಡೆ ಕೊರೊನಾ ತಡೆಯಲು ಹಗಲು–ರಾತ್ರಿ ಎನ್ನದೆ ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್‌ಗಳಿಗೆ ಅಪಮಾನ ಮಾಡಿದಂತೆ. ವಿದ್ಯಾರ್ಥಿಗಳು ಈ ವಿಷಯದಲ್ಲಿ ನಿರ್ಲಕ್ಷ್ಯ ಮಾಡದೆ ಮುಂಜಾಗ್ರತೆ ವಹಿಸಿ, ಕೊರೊನಾ ನಿಯಂತ್ರಣಕ್ಕಾಗಿ ಹೋರಾಡುತ್ತಿರುವವರ ಶ್ರಮವನ್ನು ಗೌರವಿಸಬೇಕು.

ನಟರಾಜು ಜಿ. ಶಾಹೂ, ಕೊಳ್ಳೇಗಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT