ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾರಿ ತೋರಬೇಕಾದವರೇ ಗಲಿಬಿಲಿಗೆ ಒಳಗಾದರೆ...

Last Updated 26 ನವೆಂಬರ್ 2020, 20:23 IST
ಅಕ್ಷರ ಗಾತ್ರ

ಕಾರ್ಜುವಳ್ಳಿ ಮಠದ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವರದಿ ಪ್ರಕಟವಾಗಿದೆ (ಪ್ರ.ವಾ., ನ. 26). ಸಮಾಜ ತಪ್ಪು ಹಾದಿಯಲ್ಲಿ ನಡೆದಾಗ ಅಥವಾ ಗೊಂದಲದಲ್ಲಿ ಸಿಲುಕಿಕೊಂಡಾಗ, ಒಳ್ಳೆಯ ವಿಚಾರಗಳನ್ನು ತಿಳಿಸಿ ಸಮಾಜವನ್ನು ಸರಿದಾರಿಗೆ ತರಬೇಕಾದದ್ದು ಸ್ವಾಮೀಜಿಗಳ ಆದ್ಯ ಕರ್ತವ್ಯ.

ಆತ್ಮಹತ್ಯೆ ಮಹಾಪಾಪ ಎಂದು ಬೋಧಿಸಬೇಕಾದ ಸ್ವಾಮಿಗಳೇ ಸ್ವತಃ ಗಲಿಬಿಲಿಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡರೆ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುವವರು ಯಾರು? ಸನ್ಮಾರ್ಗ ಯಾವುದು ಎಂದು ತಿಳಿಸಬೇಕಾದ ಅನೇಕ ಮಾಧ್ಯಮಗಳು ಅಂತಹ ಕೆಲಸವನ್ನು ಬಹುತೇಕ ನಿಲ್ಲಿಸಿವೆ. ಇರುವುದರಲ್ಲಿ ಪುರಾಣ ಪ್ರವಚನ, ಸ್ವಾಮಿಗಳ ಉಪನ್ಯಾಸಗಳು ಕೊಂಚಮಟ್ಟಿಗೆ ಆ ಕೊರತೆಯನ್ನು ನೀಗುತ್ತಿವೆ. ಈಗ ಅದನ್ನೂ ಕಳೆದುಕೊಂಡರೆ ನೀತಿ ಹೇಳುವವರು ಯಾರು? ಸ್ವಾಮಿಗಳೇ ಆತ್ಮಹತ್ಯೆಗೆ ಶರಣಾಗುವುದು ಸಮಾಜದ ದುರಂತ ಮತ್ತು ದೌರ್ಭಾಗ್ಯ.
-ಪತ್ತಂಗಿ ಎಸ್. ಮುರಳಿ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT