ಶಿಕ್ಷಕ ತನ್ನ ವೃತ್ತಿ ಬದುಕಿನಲ್ಲಿ ರೂಢಿಸಿಕೊಂಡು ಬಂದ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕಾರ್ಯದಕ್ಷತೆಯನ್ನ ಶಿಕ್ಷಣ ಇಲಾಖೆಯೇ ಗುರುತಿಸಿ ಪ್ರಶಸ್ತಿ ನೀಡಿದರೆ ಉತ್ತಮ. ಅಲ್ಲದೆ ಎಷ್ಟೋ ಶಿಕ್ಷಕರು ಅರ್ಹತೆ ಇಲ್ಲದಿದ್ದರೂ ಪ್ರಶಸ್ತಿಗೆ ಅರ್ಜಿ ಸಲ್ಲಿಸಿ, ಪ್ರಭಾವಿ ರಾಜಕಾರಣಿಗಳ ಮೂಲಕ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಪ್ರಶಸ್ತಿ ಪಡೆಯುತ್ತಿರುವುದು ದುರ್ದೈವದ ಸಂಗತಿ. ಹೀಗಾಗಿ ಶಿಕ್ಷಣ ಇಲಾಖೆಯು ಶಿಕ್ಷಕ ಪ್ರಶಸ್ತಿಯ ಆಯ್ಕೆಯ ಮಾನದಂಡವನ್ನು ಬದಲಿಸಲಿ.