ಭಯೋತ್ಪಾದನಾ ಸಂಘಟನೆಗಳಿಗೆ ಆಶ್ರಯ ನೀಡಿ ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಜಾಗತಿಕ ಮಟ್ಟದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ. ಆದರೆ, ಕರ್ನಾಟಕವೂ ಸೇರಿದಂತೆ ಭಾರತದ ಹಲವು ಕಡೆ ಕೆಲವು ವಿಕೃತ ವ್ಯಕ್ತಿಗಳು ದಾಳಿಯನ್ನು ಸಂಭ್ರಮಿಸಿ, ದಾಳಿಕೋರನನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆಗಳನ್ನು ಪೋಸ್ಟ್ ಮಾಡಿದ್ದಾರೆ. ಅಂಥವರನ್ನು ಪೊಲೀಸರು ಬಂಧಿಸುತ್ತಿದ್ದಾರೇನೋ ಸರಿ. ಆದರೆ ಮುಂದೇನಾಗುತ್ತದೆ?