ಆದರೆ ಈಗ ಅಂಚೆ ವ್ಯವಸ್ಥೆ ಸಾಕಷ್ಟು ಬದಲಾಗಿದೆ. ಆಧುನಿಕ ತಂತ್ರಜ್ಞಾನ ನೆರವಾಗಿ ಅವರ ಕೆಲಸದ ಹೊರೆಯನ್ನು ಕೊಂಚ ಕಡಿಮೆ ಮಾಡಿದೆ. ಕಾಲಕಾಲಕ್ಕೆ ಬಡ್ತಿ, ಸಂಬಳ ಹೆಚ್ಚಳ, ಭತ್ಯೆ ಇನ್ನಿತರ ಸೌಲಭ್ಯಗಳನ್ನು ಅವರು ಪಡೆದುಕೊಳ್ಳುತ್ತಿದ್ದಾರೆ. ಆದರೂ ಅಂಚೆ ಇಲಾಖೆಯ ನಾಲ್ವರು ನೌಕರರು ದುರಾಸೆ ಮತ್ತು ಕರ್ತವ್ಯಲೋಪದಿಂದ, ಸಮಾಜಕ್ಕೆ ಕಂಟಕಪ್ರಾಯವಾದ ಮಾದಕವಸ್ತು ಮಾರಾಟ ಜಾಲದಲ್ಲಿ ಸಿಲುಕಿಕೊಂಡಿರುವುದು(ಪ್ರ.ವಾ., ಡಿ. 31) ಅಕ್ಷಮ್ಯ ಅಪರಾಧ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಚಕಾರ ತರುವ ಇಂತಹವರ ವಿರುದ್ಧ ಪೊಲೀಸ್ ಇಲಾಖೆಯು ಕಠಿಣ ಕ್ರಮ ಕೈಗೊಳ್ಳಬೇಕು.