<p>ಕೋವಿಡ್ –19 ಎರಡನೇ ಅಲೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್ಡೌನ್ನಿಂದಾಗಿ ತೊಂದರೆ ಅನುಭವಿಸುತ್ತಿರುವ ದಿನಗೂಲಿ ಕಾರ್ಮಿಕರ ಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕಾಗಿದೆ. ಇಂತಹ ಕಠಿಣ ಲಾಕ್ಡೌನ್ ಸಮಯದಲ್ಲಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನೂ (ನರೇಗಾ) ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಿರುವುದು ಖಂಡನೀಯ.</p>.<p>ಲಾಕ್ಡೌನ್ನಂತಹ ಕಠಿಣ ಸಮಯದಲ್ಲಿ ಉದ್ಯೋಗ ಖಾತರಿ ಯೋಜನೆಯು ಬಡಜನರ ನೆರವಿಗೆ ಬರುತ್ತದೆ. ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಕೂಡಲೇ ಪುನರಾರಂಭಿಸಬೇಕು. ಇಲ್ಲವಾದಲ್ಲಿ ದಿನಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಪ್ರತೀ ಕೂಲಿ ಕಾರ್ಮಿಕರ ಖಾತೆಗೆ ಕನಿಷ್ಠ ₹ 10 ಸಾವಿರ ಹಾಕಬೇಕು.</p>.<p><em><strong>–ಫಕ್ರುದ್ದೀನ್ ಚನಗ್ಲೇರ್, <span class="Designate">ಸುಲೇಪೇಟ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋವಿಡ್ –19 ಎರಡನೇ ಅಲೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್ಡೌನ್ನಿಂದಾಗಿ ತೊಂದರೆ ಅನುಭವಿಸುತ್ತಿರುವ ದಿನಗೂಲಿ ಕಾರ್ಮಿಕರ ಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕಾಗಿದೆ. ಇಂತಹ ಕಠಿಣ ಲಾಕ್ಡೌನ್ ಸಮಯದಲ್ಲಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನೂ (ನರೇಗಾ) ಲಾಕ್ಡೌನ್ ಕಾರಣದಿಂದ ಸ್ಥಗಿತಗೊಳಿಸಿರುವುದು ಖಂಡನೀಯ.</p>.<p>ಲಾಕ್ಡೌನ್ನಂತಹ ಕಠಿಣ ಸಮಯದಲ್ಲಿ ಉದ್ಯೋಗ ಖಾತರಿ ಯೋಜನೆಯು ಬಡಜನರ ನೆರವಿಗೆ ಬರುತ್ತದೆ. ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಕೂಡಲೇ ಪುನರಾರಂಭಿಸಬೇಕು. ಇಲ್ಲವಾದಲ್ಲಿ ದಿನಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಪ್ರತೀ ಕೂಲಿ ಕಾರ್ಮಿಕರ ಖಾತೆಗೆ ಕನಿಷ್ಠ ₹ 10 ಸಾವಿರ ಹಾಕಬೇಕು.</p>.<p><em><strong>–ಫಕ್ರುದ್ದೀನ್ ಚನಗ್ಲೇರ್, <span class="Designate">ಸುಲೇಪೇಟ</span></strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>