ಇತ್ತಿಚೆಗೆ ಹಲವು ವಿರೋಧಗಳ ಮಧ್ಯೆ ಕರ್ನಾಟಕದಲ್ಲಿನ ಮರಾಠಿಗರ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ‘ಮರಾಠ ಅಭಿವೃದ್ಧಿ ನಿಗಮ’ವನ್ನು ಆರಂಭಿಸಿ, ರಾಜ್ಯದ ಅಖಂಡತೆಯನ್ನು ಮೆರೆದಿದ್ದಾರೆ. ಇದೆಲ್ಲವನ್ನೂ ಮರೆತಂತಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ, ರಾಜಕೀಯಪ್ರೇರಿತವಾದ ಉದ್ಧಟತನದ ಹೇಳಿಕೆಗಳನ್ನು ಕೊಡುವುದು ಸೂಕ್ತವಲ್ಲ. ಗೌರವಾನ್ವಿತ ಸ್ಥಾನದಲ್ಲಿರುವ ಅವರು ತಣ್ಣಗಾಗಿದ್ದ ಗಡಿ ವಿಷಯವನ್ನು ಮತ್ತೆ ಕೆಣಕಿ ಕನ್ನಡಿಗರ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ಇಂತಹ ಹೇಳಿಕೆಗಳು ಖಂಡನೀಯ.