ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿ ಒಂದೊಂದು ರಂಗಮಂದಿರವನ್ನು ಕಲಾಕ್ಷೇತ್ರದ ಮಾದರಿಯಲ್ಲಿ ನಿರ್ಮಿಸಲು ₹ 60 ಕೋಟಿ ವೆಚ್ಚ ಮಾಡುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಹೇಳಿರುವುದಾಗಿ ವರದಿಯಾಗಿದೆ. ಇಷ್ಟೊಂದು ಹಣವನ್ನು ಬರೀ ಬೆಂಗಳೂರಿನ ನಾಲ್ಕು ರಂಗಮಂದಿರಗಳಿಗೆ ಖರ್ಚು ಮಾಡುವ ಬದಲು ಪ್ರತೀ ಜಿಲ್ಲೆ ಹಾಗೂ ತಾಲ್ಲೂಕಿಗೆ ಹಂಚಿಕೆ ಮಾಡಿದರೆ, ನೂರಾರು ಹಳ್ಳಿಗಳಲ್ಲಿ ಬಯಲು ರಂಗಮಂದಿರ ನಿರ್ಮಾಣ ಮಾಡಬಹುದಲ್ಲವೇ? ಕಲಾಕ್ಷೇತ್ರದಲ್ಲಿ ಗ್ರಾಮೀಣ ರಂಗಭೂಮಿಯದ್ದೇ ಸಿಂಹಪಾಲು ಎಂಬುದು ಸರ್ಕಾರಕ್ಕೆ ಗೊತ್ತಿಲ್ಲವೇ?