ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತಹ ಅನೇಕ ವ್ಯಕ್ತಿಗಳು ಈ ಸಂಪ್ರದಾಯ ಪಾಲಿಸಿದ್ದಾರೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಹ ದೊಡ್ಡ ವ್ಯಕ್ತಿಯನ್ನು ಭೇಟಿ ಮಾಡಿ ಅವರ ಆಶೀರ್ವಾದ, ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಸುಸಂಸ್ಕೃತ ನಡೆಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸಣ್ಣತನದ ನಡೆ ಎನಿಸಿಕೊಳ್ಳುತ್ತದೆ.