ರಾಜ್ಯದ ಬಹುತೇಕ ವಿಶ್ವವಿದ್ಯಾಲಯಗಳಲ್ಲಿ ಮಹಾನ್ ಚಿಂತಕರು, ದಾರ್ಶನಿಕರು, ಶರಣರ ಹೆಸರಿನಲ್ಲಿ ಅಧ್ಯಯನ ಪೀಠಗಳಿವೆ. ಇವು ಕೇವಲ ದತ್ತಿನಿಧಿಗಳ ಬಡ್ಡಿ ಹಣದಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಎಷ್ಟೋ ಪೀಠಗಳಿಗೆ ಸ್ವತಂತ್ರ ಕಟ್ಟಡಗಳೂ ಇಲ್ಲ. ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಬದಲು, ಸಂಪನ್ಮೂಲ ಕೊರತೆಯಿಂದ ನರಳುತ್ತಿರುವ ಬಸವ, ಕನಕ, ಗಾಂಧಿ, ಅಂಬೇಡ್ಕರ್, ಲೋಹಿಯಾ ಮುಂತಾದ ಪೀಠಗಳನ್ನು ಭೌತಿಕವಾಗಿ, ಬೌದ್ಧಿಕವಾಗಿ ಅಭಿವೃದ್ಧಿಪಡಿಸಲಿ.