ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಎರಡು ವಾರಗಳಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಲಾಗಿದೆ. ಈ ಸಮಯದಲ್ಲಿ ಅನಗತ್ಯ ಓಡಾಟವನ್ನು ಕಡಿಮೆ ಮಾಡಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬರಬಹುದು ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಆದರೂ ಪೊಲೀಸರು ಯಾವುದೇ ವಿಚಾರಣೆ ಇಲ್ಲದೆ ಅನೇಕ ಜನಸಾಮಾನ್ಯರ ಮೇಲೆ ಲಾಠಿಪ್ರಹಾರ ಮಾಡುತ್ತಿರುವುದು ಅತಿಶೋಚನೀಯ. ಪೊಲೀಸ್ ಎಂದರೆ ಜನರಲ್ಲಿ ಗೌರವಭಾವ ಇರಬೇಕೇ ವಿನಾ ಭಯವಲ್ಲ. ಈ ಕುರಿತು ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರು ಸೂಕ್ತ ಕ್ರಮವನ್ನು ಕೈಗೊಳ್ಳುವುದು ಅಗತ್ಯವಾಗಿದೆ.