ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಕಲಾ ವಿಭಾಗದ ಕಡೆಗಣನೆಗೆ ನಿದರ್ಶನ

Last Updated 5 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ಯುಪಿಎಸ್‌ಸಿಯಲ್ಲಿ ಕರ್ನಾಟಕದ ಕೆಲವು ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ಆಯ್ಕೆಯಾಗಿರುವುದು ಸಂತಸದ ವಿಚಾರ. ಆದರೆ ಈ ಅಭ್ಯರ್ಥಿಗಳಲ್ಲಿ ಯಾರೊಬ್ಬರೂ ಕಲಾ ವಿಭಾಗದಿಂದ ಆಯ್ಕೆಯಾಗಿಲ್ಲ. ಕರ್ನಾಟಕದಲ್ಲಿ ಕಲಾ ವಿಭಾಗವು ಕಡೆಗಣನೆಗೆ ಒಳಗಾಗಿರುವುದು ಇದರಿಂದ ತಿಳಿಯುತ್ತದೆ.

ಇದಕ್ಕೆ ಇನ್ನೊಂದು ನಿದರ್ಶನವೆಂದರೆ, ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅತಿಹೆಚ್ಚಿನ ಪ್ರಮಾಣದಲ್ಲಿ ಅನುರ್ತೀರ್ಣರಾಗಿರುವವರು ಕಲಾ ವಿಭಾಗದವರು, ಅದರಲ್ಲೂ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳು. ಇದು ಕಲಾ ವಿಭಾಗದ ಬಗ್ಗೆ ಮತ್ತು ಕನ್ನಡದ ಬಗ್ಗೆ ನಮಗಿರುವ ಅಸಡ್ಡೆಯನ್ನು ಎತ್ತಿ ತೋರಿಸುತ್ತದೆ.

-ಬಸವರಾಜ್ ಕರೇಕಲ್, ಕೊಪ್ಪಳ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT