ಇದೇನೂ ಹೊಸ ಪ್ರಸ್ತಾವವಲ್ಲ. ಮಾಯಾವತಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿದ್ದಾಗ, ರಾಜ್ಯವನ್ನು ವಿಭಜಿಸಿ ನಾಲ್ಕು ಪ್ರತ್ಯೇಕ ರಾಜ್ಯಗಳನ್ನು ರೂಪಿಸುವ ಸಂಬಂಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದರು. ಆದರೆ ಆಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ನೇತೃತ್ವದ ಸರ್ಕಾರ ಈ ಪ್ರಸ್ತಾವವನ್ನು ಕೈಬಿಟ್ಟು, ಆಂಧ್ರ ಪ್ರದೇಶವನ್ನು ವಿಭಜಿಸಿ
ಕೈಸುಟ್ಟುಕೊಂಡಿತು. ಈಗಲಾದರೂ ಉತ್ತರಪ್ರದೇಶವನ್ನು ವಿಭಜಿಸಿದರೆ, ಅಲ್ಲಿಯ ಅಭಿವೃದ್ಧಿಯ ವೇಗ ಹೆಚ್ಚಿ, ತೀವ್ರವಾಗಿ ಕಾಡುತ್ತಿರುವ ನಿರುದ್ಯೋಗ ಹಾಗೂ ಕಾನೂನು ಸುವ್ಯವಸ್ಥೆ ಸಮಸ್ಯೆ ನಿಯಂತ್ರಣಕ್ಕೆ ಬರಬಹುದು.