ರಾಜಕೀಯ ನಾಯಕರು ತಮ್ಮ ಬೇಳೆ ಬೇಯಿಸಿಕೊಳ್ಳಲು ಇತ್ತೀಚೆಗೆ ಹೊಸ ಹೊಸ ಪದಗಳನ್ನು ಪರಿಚಯಿಸುತ್ತಿರುವುದು ನಮ್ಮೆಲ್ಲರ ದೌರ್ಭಾಗ್ಯವೇ ಸರಿ. ತುಕ್ಡೆ ತುಕ್ಡೆ ಗ್ಯಾಂಗ್, ರಾತ್ರಿ ರಾಜಕೀಯದಂತಹ ಪದಗಳನ್ನು ಬಳಸುವುದು, ತಾಲಿಬಾನ್ ಹೋರಾಟಕ್ಕೆ ಹೋಲಿಸುವುದು ನಡೆಯುತ್ತಿದೆ. ಹೀಗೆ ಮಾತನಾಡುವ ನಮ್ಮ ನಾಯಕರನ್ನು ಪಕ್ಷಭೇದ ಮರೆತು ಖಂಡಿಸಬೇಕಾಗಿದೆ. ಸಾರ್ವಜನಿಕವಾಗಿ ಹೇಗೆ ಮಾತನಾಡಬೇಕು ಜೊತೆಗೆ ಯಾವ ರೀತಿಯಲ್ಲಿ ನಡೆದು
ಕೊಳ್ಳಬೇಕು ಎಂಬ ಬಗ್ಗೆ ಜನಪ್ರತಿನಿಧಿಗಳಿಗೆ ಕಾರ್ಯಾಗಾರಗಳನ್ನು ನಡೆಸಿ, ಅವರನ್ನು ಪ್ರಜ್ಞಾವಂತ ನಾಯಕರನ್ನಾಗಿ ರೂಪಿಸಬೇಕಾಗಿದೆ. ಇಲ್ಲವಾದಲ್ಲಿ ಇಂತಹವರಿಂದ ಸಮಾಜ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಾಗದು.
-ಹರವೆಸಂಗಣ್ಣ ಪ್ರಕಾಶ್,ಹರವೆ, ಚಾಮರಾಜನಗರ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.