ಸಂಗೀತವು ಮಾನಸಿಕ ಒತ್ತಡ ಕಡಿಮೆ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ನೆರವಾಗುತ್ತದೆ. ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಂಗೀತ ಶಿಕ್ಷಕರ ಬಹಳಷ್ಟು ಹುದ್ದೆಗಳು ಖಾಲಿ ಇದ್ದರೂ ನೇಮಕಾತಿ ನಡೆದಿಲ್ಲ. ಸಂಗೀತ ವಿದ್ವತ್ ಪದವಿ ಹೊಂದಿದ ಅನೇಕ ಯುವಜನರು ನಿರುದ್ಯೋಗಿಗಳಾಗಿದ್ದಾರೆ. ಸರ್ಕಾರ ಇನ್ನಾದರೂ ಶಾಲೆಗಳಿಗೆ ಸಂಗೀತ ಶಿಕ್ಷಕರನ್ನು ನೇಮಿಸಿ, ಕಲೆಗೆ ಪ್ರೋತ್ಸಾಹ ನೀಡಬೇಕು. ಈ ಮೂಲಕ ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸಬೇಕು.