ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ತಮ್ಮ ಹಳೇ ಚಾಳಿಯನ್ನು ಮುಂದುವರಿಸಿ, ‘ಇದು ನನ್ನ ಕೊನೆಯ ಚುನಾವಣಾ ಪ್ರಚಾರ, ಮುಂದೆ ಬರುತ್ತೇನೋ ಇಲ್ಲವೋ ಗೊತ್ತಿಲ್ಲ’ ಎಂದು ಹೇಳಿದ್ದಾರೆ. ಜತೆಗೆ, ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ಹಿಂದೆ ತಮ್ಮ ಸೋಲಿಗೆ ಕಾರಣರಾದವರಿಗೆ ತಕ್ಕಪಾಠ ಕಲಿಸುವ ಮೂಲಕ ತಮಗಾದ ನೋವನ್ನು ಸರಿಪಡಿಸಬೇಕೆಂದು ಮಧುಗಿರಿಯಲ್ಲಿ ಇತ್ತೀಚೆಗೆ ತಮ್ಮ ಪಕ್ಷದ ಅಭ್ಯರ್ಥಿ ಪರ ಹಮ್ಮಿಕೊಂಡಿದ್ದ ಪ್ರಚಾರ ಸಭೆ ‘ಜನತಾ ಸಂಗಮ’ ಸಮಾವೇಶದಲ್ಲಿ ಹೇಳಿದ್ದಾರೆ. ಈ ಮೂಲಕ ತಮ್ಮ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳುವ ಹಾದಿ ತುಳಿದಿರುವುದು ಸರಿಯಲ್ಲ.