ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂದಿನ ಉಲ್ಲಂಘನೆಯನ್ನೂ ಪರಿಗಣಿಸಿ

ಅಕ್ಷರ ಗಾತ್ರ

ಕೋವಿಡ್‌ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಪೊಲೀಸ್‌ ಇಲಾಖೆಗೆ ಹೈಕೋರ್ಟ್‌ ಆದೇಶಿಸಿರುವುದು ಸರಿಯಾಗಿದೆ. ರಾಜಕಾರಣಿಗಳು, ಧಾರ್ಮಿಕ ಮುಖಂಡರು ನಿಯಮ ಪಾಲಿಸುವ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿತ್ತು. ಅವರೇ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಸರಿಯಲ್ಲ. ಹೀಗಾಗಿ ಅಂತಹ ಗಣ್ಯರ ವಿರುದ್ಧ ತ್ವರಿತವಾಗಿ ಕ್ರಮ ಜರುಗಿಸಿ ಎಂದು ಹೇಳಿರುವುದು ಸ್ವಾಗತಾರ್ಹ. ಇನ್ನು ಮೇಲೆ ಇಂತಹ ತಪ್ಪೆಸಗುವ ಗಣ್ಯರ ವಿರುದ್ಧ ಇಲಾಖೆಯು ಯಾವ ಹಿಂಜರಿಕೆಯೂ ಇಲ್ಲದೆ ಕ್ರಮ ಜರುಗಿಸಿ ಕರ್ತವ್ಯಪ್ರಜ್ಞೆ ಮೆರೆಯುತ್ತದೆ ಎಂದು ನಂಬಬಹುದೇನೋ.

ಗಣ್ಯ ವ್ಯಕ್ತಿಗಳು ಕಾನೂನನ್ನು ಉಲ್ಲಂಘಿಸಿದಾಗ ತಮ್ಮ ಸ್ಥಾನಾರ್ಹತೆಗೆ ಎರವಾಗಿ, ಕಾನೂನಿನ ದೃಷ್ಟಿಯಲ್ಲಿ ತಪ್ಪಿತಸ್ಥ ಅಥವಾ ಆರೋಪಿ ಎಂದಾಗುತ್ತಾರೆ. ಆಗ ಕೆಳಹಂತದ ಪೊಲೀಸ್‌ ಅಧಿಕಾರಿ ಕೂಡ ಅವರ ವಿರುದ್ಧ ಕ್ರಮ ಕೈಗೊಳ್ಳುವುದು ಸಾಧ್ಯವಾಗುತ್ತದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯನ್ನು ಉಲ್ಲಂಘಿಸಿ ಸಭೆ– ಸಮಾರಂಭಗಳನ್ನು ಈಗಾಗಲೇ ನಡೆಸಿರುವ ಪ್ರತಿಷ್ಠಿತರ ವಿರುದ್ಧವೂ ಕ್ರಮ ಜರುಗುವಂತಾದರೆ ಸಾಮಾನ್ಯ ಜನ ಸಹಎಚ್ಚೆತ್ತುಕೊಳ್ಳುತ್ತಾರೆ.

- ಸಾಮಗ ದತ್ತಾತ್ರಿ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT