ಕೋವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಸಾಂಕ್ರಾಮಿಕ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆಪೊಲೀಸ್ ಇಲಾಖೆಗೆ ಹೈಕೋರ್ಟ್ ಆದೇಶಿಸಿರುವುದು ಸರಿಯಾಗಿದೆ. ರಾಜಕಾರಣಿಗಳು, ಧಾರ್ಮಿಕ ಮುಖಂಡರು ನಿಯಮ ಪಾಲಿಸುವ ಮೂಲಕ ಜನಸಾಮಾನ್ಯರಿಗೆ ಮಾದರಿಯಾಗಬೇಕಿತ್ತು. ಅವರೇ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವುದು ಸರಿಯಲ್ಲ. ಹೀಗಾಗಿ ಅಂತಹ ಗಣ್ಯರ ವಿರುದ್ಧ ತ್ವರಿತವಾಗಿ ಕ್ರಮ ಜರುಗಿಸಿ ಎಂದು ಹೇಳಿರುವುದು ಸ್ವಾಗತಾರ್ಹ. ಇನ್ನು ಮೇಲೆ ಇಂತಹ ತಪ್ಪೆಸಗುವ ಗಣ್ಯರ ವಿರುದ್ಧ ಇಲಾಖೆಯು ಯಾವ ಹಿಂಜರಿಕೆಯೂ ಇಲ್ಲದೆ ಕ್ರಮ ಜರುಗಿಸಿ ಕರ್ತವ್ಯಪ್ರಜ್ಞೆ ಮೆರೆಯುತ್ತದೆ ಎಂದು ನಂಬಬಹುದೇನೋ.