ಕೊರೊನಾ ಎರಡನೇ ಅಲೆ ನಿಯಂತ್ರಣದ ಸಲುವಾಗಿ ಸರ್ಕಾರವು ಜಾಗೃತದಳವೊಂದನ್ನು ನೇಮಿಸಬೇಕು. ಕೋವಿಡ್ ರೋಗಿಗಳನ್ನು ಇರಿಸಿರುವ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳ ಮೇಲೆ ಈ ದಳವು ನಿಗಾ ಇರಿಸಬೇಕು. ಜನರಿಗೆ ಸರಿಯಾಗಿ ಚಿಕಿತ್ಸೆ ದೊರೆಯುವುದನ್ನು ಖಾತರಿಪಡಿಸಿಕೊಳ್ಳಬೇಕು. ಜೊತೆಗೆ ಜಾಗೃತದಳವು ಜಾತ್ರೆ, ಸಭೆ-ಸಮಾರಂಭ, ಮದುವೆ ಮುಂತಾದ ಕಾರ್ಯಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು, ಕಠಿಣ ಕ್ರಮಗಳನ್ನು ಜರುಗಿಸಬೇಕು. ಈ ಮೂಲಕ ಸರ್ಕಾರದ ಆರ್ಥಿಕ ಸಂಪನ್ಮೂಲ ಹಾಗೂ ಜನರ ಜೀವ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸಬೇಕು.
- ಉಮೇಶ ಎಸ್. ಹಿರೇಮಠ, ಬೈಲಹೊಂಗಲ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.