ಭಾರತ ಸೇರಿದಂತೆ ಜಗತ್ತಿನ ಹಲವು ದೇಶಗಳ ಮೇಲೆ ಕೊರೊನಾ ವೈರಾಣುವಿನ ಭೀಕರ ಛಾಯೆ ಕವಿದಿರುವ ಈ ಸಂದರ್ಭದಲ್ಲಿ, ಪರ್ಯಾಯ ವೈದ್ಯಕೀಯ ಪದ್ಧತಿಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆಯುರ್ವೇದ ಮತ್ತು ಹೋಮಿಯೋಪಥಿ ಕುರಿತು ಅಲೋಪಥಿ ಅರ್ಥಾತ್ ಪಾಶ್ಚಿಮಾತ್ಯ ವೈದ್ಯಕೀಯ ಪದ್ಧತಿಯ ತಜ್ಞರು ಈಗಲೂ ಪೂರ್ವಗ್ರಹ ಹೊಂದಿದ್ದು, ಈ ಎರಡೂ ಬಗೆಯ ಪದ್ಧತಿಗಳಲ್ಲಿನ ಔಷಧಿಗಳು ಕೊರೊನಾ ವೈರಾಣು ತಡೆಗೆ ಪರಿಣಾಮಕಾರಿ ಅಲ್ಲ ಎಂದು ವಾದಿಸುತ್ತಿದ್ದಾರೆ.