<p><strong>ಕೊರೊನಾ ವೈರಾಣುವಿನ ಕಾರಣದಿಂದ ಚೀನಾ, ಇಟಲಿ, ಇರಾನ್ ಮತ್ತಿತರ ದೇಶಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜೀವಹಾನಿ ಆಗಿದೆ. ಇದೊಂದು ಮಾನವ ದುರಂತವೂ ಹೌದು. ಈ ಪರಿಣಾಮ ನಮ್ಮ ದೇಶದ ಮೇಲೂ ಆಗಿದೆ.</strong></p>.<p><strong>ಪ್ರಸ್ತುತ, ನಮ್ಮ ರಾಜ್ಯದ, ದಿನದಿನವೂ ದುಡಿದೇ ಬದುಕುವ ಕೂಲಿಕಾರ್ಮಿಕ ವರ್ಗದವರಾದ ಟಾಂಗಾವಾಲಾಗಳು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರಿಗೆ ಕೆಲವಾರು ದಿನಗಳಿಂದ ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಆದಾಯವು ತೀವ್ರವಾಗಿ ಕಡಿತವಾಗಿದೆ ಮತ್ತು ಬದುಕು ದುಸ್ತರವಾಗಿದೆ.</strong></p>.<p><strong>ಇಂಥ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರ ನೆರವಿಗೆ ಬರಬೇಕಾದ ಅನಿವಾರ್ಯವಿದೆ. ದವಸ ಧಾನ್ಯಗಳ ವಿತರಣೆಯ ಜೊತೆಗೆ ಒಂದಷ್ಟು ಪ್ರಮಾಣದ ಹಣದ ವಿಲೇವಾರಿಯೂ ಆಗಬೇಕಿದೆ. </strong></p>.<p><strong>ಇದು ಸಹಮಾನವರ ಬಗ್ಗೆ ತೋರಿಸುವ ಮಾನವ ಕಾಳಜಿಯಲ್ಲದೆ ಬೇರೇನಲ್ಲ. ಆ ಕುರಿತು ನಮ್ಮ ಸರ್ಕಾರದ ವರಿಷ್ಠಮಂದಿ ಸಕಾರಾತ್ಮಕವಾಗಿ ಚಿಂತಿಸಿ, ಕಾರ್ಯೋನ್ಮುಖರಾಗಲಿ ಎಂಬುದು ಮಾನವೀಯತೆಯುಳ್ಳ ಎಲ್ಲರ ಕಳಕಳಿಯೂ ಆಗಿದೆ.</strong></p>.<p><em><strong>ಎಚ್.ಆರ್.ದೊರೆಸ್ವಾಮಿ,ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊರೊನಾ ವೈರಾಣುವಿನ ಕಾರಣದಿಂದ ಚೀನಾ, ಇಟಲಿ, ಇರಾನ್ ಮತ್ತಿತರ ದೇಶಗಳಲ್ಲಿ ಅಪಾರ ಸಂಖ್ಯೆಯಲ್ಲಿ ಜೀವಹಾನಿ ಆಗಿದೆ. ಇದೊಂದು ಮಾನವ ದುರಂತವೂ ಹೌದು. ಈ ಪರಿಣಾಮ ನಮ್ಮ ದೇಶದ ಮೇಲೂ ಆಗಿದೆ.</strong></p>.<p><strong>ಪ್ರಸ್ತುತ, ನಮ್ಮ ರಾಜ್ಯದ, ದಿನದಿನವೂ ದುಡಿದೇ ಬದುಕುವ ಕೂಲಿಕಾರ್ಮಿಕ ವರ್ಗದವರಾದ ಟಾಂಗಾವಾಲಾಗಳು, ಆಟೊ ಚಾಲಕರು, ಟ್ಯಾಕ್ಸಿ ಚಾಲಕರಿಗೆ ಕೆಲವಾರು ದಿನಗಳಿಂದ ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಆದಾಯವು ತೀವ್ರವಾಗಿ ಕಡಿತವಾಗಿದೆ ಮತ್ತು ಬದುಕು ದುಸ್ತರವಾಗಿದೆ.</strong></p>.<p><strong>ಇಂಥ ಸಂಕಷ್ಟದ ಸಮಯದಲ್ಲಿ ಸರ್ಕಾರ ಅವರ ನೆರವಿಗೆ ಬರಬೇಕಾದ ಅನಿವಾರ್ಯವಿದೆ. ದವಸ ಧಾನ್ಯಗಳ ವಿತರಣೆಯ ಜೊತೆಗೆ ಒಂದಷ್ಟು ಪ್ರಮಾಣದ ಹಣದ ವಿಲೇವಾರಿಯೂ ಆಗಬೇಕಿದೆ. </strong></p>.<p><strong>ಇದು ಸಹಮಾನವರ ಬಗ್ಗೆ ತೋರಿಸುವ ಮಾನವ ಕಾಳಜಿಯಲ್ಲದೆ ಬೇರೇನಲ್ಲ. ಆ ಕುರಿತು ನಮ್ಮ ಸರ್ಕಾರದ ವರಿಷ್ಠಮಂದಿ ಸಕಾರಾತ್ಮಕವಾಗಿ ಚಿಂತಿಸಿ, ಕಾರ್ಯೋನ್ಮುಖರಾಗಲಿ ಎಂಬುದು ಮಾನವೀಯತೆಯುಳ್ಳ ಎಲ್ಲರ ಕಳಕಳಿಯೂ ಆಗಿದೆ.</strong></p>.<p><em><strong>ಎಚ್.ಆರ್.ದೊರೆಸ್ವಾಮಿ,ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>