ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ನ್ಯಾಯಾಂಗದ ಮೇಲೆ ಪರೋಕ್ಷ ದಾಳಿ

Last Updated 13 ಜನವರಿ 2023, 19:30 IST
ಅಕ್ಷರ ಗಾತ್ರ

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಸಂಸತ್ತೇ ಸರ್ವೋಚ್ಚ ಎಂದು ಹೇಳುವ ಮೂಲಕ ಪ್ರಸ್ತುತ ಸರ್ಕಾರದ ಗುಪ್ತಕಾರ್ಯಸೂಚಿಯನ್ನು ಅನಾವರಣಗೊಳಿಸಿದ್ದಾರೆ ಎನಿಸುತ್ತದೆ. ಸಂಸತ್ತಿಗೆ ಶಾಸನ ರೂಪಿಸುವ ಶ್ರೇಷ್ಠ ಅಧಿಕಾರವಿದೆ ನಿಜ. ಆದರೆ ಆ ಅಧಿಕಾರವು ನ್ಯಾಯಾಂಗದ ವಿಮರ್ಶೆಗೆ ಒಳಗಾಗುವುದು ಅಧಿಕಾರ ಪ್ರತ್ಯೇಕತಾ ಸಿದ್ಧಾಂತದ ಪ್ರಕಾರ ಸರಿ. ಕೇಶವಾನಂದ ಭಾರತಿ ಪ್ರಕರಣದಲ್ಲಿ, ಭಾರತ ಸಂವಿಧಾನದ ಮೂಲಭೂತ ರಚನೆ ಮತ್ತು ತತ್ವಗಳನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇಲ್ಲವೆಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡುವುದರ ಮೂಲಕ ಶಾಸಕಾಂಗದ ಸರ್ವಾಧಿಕಾರಕ್ಕೆ ಕಡಿವಾಣ ಹಾಕಿದೆ. ಈ ತೀರ್ಪನ್ನೇ ಅವಹೇಳನ ಮಾಡುವಂತೆ ಮಾತನಾಡಿರುವ ಧನಕರ್‌ ಅವರು ದೇಶದ ನ್ಯಾಯಾಂಗದ ಮೇಲೆ ಪರೋಕ್ಷವಾಗಿ ದಾಳಿ ಮಾಡಿದ್ದಾರೆ.

ಭಾರತದಲ್ಲಿ ಸಂವಿಧಾನವೇ ಶ್ರೇಷ್ಠವಾದುದು. ಸರ್ಕಾರದ ಮೂರೂ ಅಂಗಗಳು ಸಂವಿಧಾನದ ಮೂಲ ಆಶಯದಂತೆಯೇ ಕಾರ್ಯನಿರ್ವಹಿಸಬೇಕು. ಹಾಗಾಗದಿದ್ದಲ್ಲಿ ದೇಶದಲ್ಲಿ ಅರಾಜಕತೆ ತನ್ನ ರೂಕ್ಷಬಾಹುಗಳನ್ನು ದಶದಿಕ್ಕುಗಳಿಗೂ ಚಾಚಿ ಪ್ರಜಾಪ್ರಭುತ್ವವನ್ನು ತಬ್ಬಿಕೊಳ್ಳುತ್ತದೆ.

–‌ಮೋದೂರು ಮಹೇಶಾರಾಧ್ಯ, ಹುಣಸೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT