ಭಾರತೀಯ ಬ್ಯಾಂಕ್ಗಳಿಗೆ ₹ 9 ಸಾವಿರ ಕೋಟಿಗೂ ಹೆಚ್ಚಿನ ಮೊತ್ತದ ಸಾಲ ಮರುಪಾವತಿಸದೆ ಲಂಡನ್ಗೆ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಮರಳಿ ಕರೆತರುವ ಕೇಂದ್ರ ಸರ್ಕಾರದ ಸತತ ಪ್ರಯತ್ನಕ್ಕೆ ಯಶಸ್ಸು ದೊರಕಿದೆ. ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸಲು ಬ್ರಿಟನ್ ಗೃಹ ಸಚಿವಾಲಯದ ಕಾರ್ಯದರ್ಶಿ ಒಪ್ಪಿಗೆ ನೀಡಿರುವುದು ಆಶಾದಾಯಕ ಬೆಳವಣಿಗೆ. ಇದರಿಂದ, ಆರ್ಥಿಕ ಅಪರಾಧಿ ಮಲ್ಯ ಅವರನ್ನು ಭಾರತಕ್ಕೆ ಕರೆತಂದು ವಿಚಾರಣೆಗೆ ಒಳಪಡಿಸಲು ಸಾಧ್ಯವಾಗಲಿದೆ.