ಆಸ್ಪತ್ರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದ ಅಮಾಯಕ ಬಾಣಂತಿಯರಿಗೆ ಆದ ತೊಂದರೆಯಿಂದ ಅವರ ಕುಟುಂಬದವರೂ ತೀವ್ರ ನೋವು ಅನುಭವಿಸುವಂತೆ ಆಗಿದೆ. ಇದಕ್ಕೆಲ್ಲ ಹೊಣೆಗಾರರು ಯಾರು? ಈ ಪ್ರಕರಣವನ್ನು ಆರೋಗ್ಯ ಇಲಾಖೆಯು ಗಂಭೀರವಾಗಿ ಪರಿಗಣಿಸಿ, ಕಾರಣರಾದವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಜೊತೆಗೆ ರಾಜ್ಯದಾದ್ಯಂತ ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆಯನ್ನು ಸರಿಪಡಿಸಲು ಮುಂದಾಗಬೇಕು.