ಹಿಂದೆ ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸುವ ಮೂಲಕ ಆಕಸ್ಮಿಕವಾಗಿ ಮುಖ್ಯಮಂತ್ರಿಯಾದ ಎಚ್.ಡಿ.ಕುಮಾರಸ್ವಾಮಿ, ರಾಜಕೀಯ ಲೆಕ್ಕಾಚಾರಗಳನ್ನು ಬುಡಮೇಲು ಮಾಡಿದ್ದರು. ಬಳಿಕ, ರಾಮಕೃಷ್ಣ ಹೆಗಡೆ ಕಾಲದ ಜನತಾ ದರ್ಶನ ಕಾರ್ಯಕ್ರಮ ಮುಂದುವರಿಸಿದ್ದರು. ಗ್ರಾಮ ವಾಸ್ತವ್ಯದಂತಹ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡು, ಜನರ ಮನೆ ಬಾಗಿಲಿಗೆ ತೆರಳಿದ ರಾಜ್ಯದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಕಾರಣರಾದರು.