ಈ ಸಾಧನೆಗೆ ಕಾರಣವಾದ ತ್ಯಾಜ್ಯ ಸಂಗ್ರಹ ವಿಧಾನ, ಹಸಿ ಮತ್ತು ಒಣ ಕಸ ಬೇರ್ಪಡಿಸುವಿಕೆ, ವೈಜ್ಞಾನಿಕ ವಿಲೇವಾರಿ, ಸಾರ್ವಜನಿಕರಿಂದ ಶುಲ್ಕ ಸಂಗ್ರಹದಂತಹ ಕಾರ್ಯಗಳು ರಾಜ್ಯದ ಇತರ ಜಿಲ್ಲೆಗಳೂ ಅನುಸರಿಸುವಂತೆ ಆಗಬೇಕು. ಸ್ವಚ್ಛತೆಯ ವಿಷಯದಲ್ಲಿ ಮೈಸೂರು ಇನ್ನೂ ಉನ್ನತ ಮಟ್ಟಕ್ಕೆ ಏರಬೇಕು. ಈ ದಿಸೆಯಲ್ಲಿ ಮಕ್ಕಳಿಗೆ ಎಳವೆಯಿಂದಲೇ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಕುಟುಂಬ, ಶಾಲಾ ಕಾಲೇಜುಗಳು ಇದನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಬೇಕಾಗಿದೆ.