ನಮ್ಮ ಬದುಕಿನಲ್ಲಿ ನೀರು ಅತಿ ಮುಖ್ಯವಾದ ಪಾತ್ರ ವಹಿಸುತ್ತದೆ. ಆದರೆ ಅದರ ಮಹತ್ವವನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡಿಸುವಲ್ಲಿ ನಮ್ಮ ವ್ಯವಸ್ಥೆ ಸೋತಿದೆ. ಕೆರೆ, ತೊರೆ, ನಾಲೆ, ಬಾವಿ ಮೊದಲಾದ ನೀರಿನ ಮೂಲಗಳ ಸಂರಕ್ಷಣೆಗೆ ನೀಡಬೇಕಾದ ಮಹತ್ವ ನೀಡಲಿಲ್ಲ. ಅದರ ಪರಿಣಾಮವನ್ನು ಈಗ ಎದುರಿಸುತ್ತಿದ್ದೇವೆ. ಬಯಲುಸೀಮೆಯ ಕೆಲವು ಜಿಲ್ಲೆಗಳಲ್ಲಿ ಅಂತರ್ಜಲ ಮಟ್ಟ ದಿನೇ ದಿನೇ ಕುಸಿಯುತ್ತಲೇ ಇದೆ. ಆದರೂ ನಾವು ಎಚ್ಚೆತ್ತುಕೊಂಡಿಲ್ಲ ಎಂಬುದು ನೋವಿನ ಸಂಗತಿ.