ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಲಿ ಪ್ರವಾಹ, ಇಲ್ಲಿ ಹನಿ ನೀರಿಗೂ ಹಾಹಾಕಾರ

Last Updated 13 ಆಗಸ್ಟ್ 2019, 18:37 IST
ಅಕ್ಷರ ಗಾತ್ರ

ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದರೆ, ಚಿತ್ರದುರ್ಗ, ದಾವಣಗೆರೆ ಭಾಗದ ಬಹುತೇಕ ಕಡೆ ತೀವ್ರ ಬರಗಾಲ ಇದೆ. ಕುಡಿಯುವ ನೀರಿಗೂ ಪರದಾಡಬೇಕಾಗಿದೆ.

ಆಡಳಿತ ಯಂತ್ರ ನಿಷ್ಕ್ರಿಯವಾಗಿದ್ದು, ಜನರ ಗೋಳು ಕೇಳುವವರೇ ಇಲ್ಲದಂತಾಗಿದೆ. ಇಂತಹ ಸ್ಥಿತಿಯಲ್ಲಿ, ಮಳೆ ಬರಲಿ ಎಂದು ದೇವರಿಗೆ ಮೊರೆ ಇಡುವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ. ಇಂಥ ಕಾರ್ಯಕ್ರಮಗಳನ್ನು ಕೆಲ ಕಾಲ ಮುಂದೂಡಿ, ಕುಡಿಯಲು ಮತ್ತು ಕೃಷಿಗೆ ನೀರು ಪೂರೈಕೆಯಾಗುವಂತಹ ಕ್ರಮಗಳತ್ತ ಯೋಚಿಸಬಾರದೇಕೆ? ಜನರು ಬೆಳೆ ಹಾನಿಯಿಂದ, ಬರಗಾಲದಿಂದ ಕಂಗೆಟ್ಟು ಕೂರುವ ಬದಲು, ಪ್ರಕೃತಿ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ಕಲಿತಾರೆಯೇ?

ಶಾಂತವೀರ ಎಸ್‌., ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT