ಮಳೆ ನೀರನ್ನು ಇಂಗಿಸಿ ಅಂತರ್ಜಲವನ್ನು ವೃದ್ಧಿಸಲು, ಅಳಿದುಳಿದಿರುವ ನೀರಿನ ಮೂಲಗಳನ್ನು ಕಾಪಾಡಿಕೊಳ್ಳಬೇಕಾದ ಜವಾಬ್ದಾರಿ ಪ್ರತಿಯೊಬ್ಬರದ್ದಾಗಿದೆ. ಸರ್ಕಾರ ಇನ್ನಾದರೂ ಎಚ್ಚೆತ್ತು, ಉಳಿದಿರುವ ಕೆರೆಕಟ್ಟೆ, ಬಾವಿಗಳ ಪುನಶ್ಚೇತನಕ್ಕಾಗಿ ಸೂಕ್ತ ಯೋಜನೆಗಳನ್ನು ರೂಪಿಸಬೇಕಿದೆ. ಜೊತೆಗೆ ಹಲವು ಪೀಳಿಗೆಗಳ ಉಳಿವಿಗಾಗಿ ಪ್ರತಿಯೊಬ್ಬರೂ ಜಲಮೂಲಗಳ ರಕ್ಷಣೆಗೆ ಪಣ ತೊಡಬೇಕಿದೆ.