ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ನಡ ಬಳಕೆ ಹೆಚ್ಚಿಸೋಣ

Last Updated 15 ಸೆಪ್ಟೆಂಬರ್ 2022, 19:30 IST
ಅಕ್ಷರ ಗಾತ್ರ

ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವುದಕ್ಕಾಗಿ ಮಸೂದೆಯೊಂದನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದು, ಸ್ವಾಗತಾರ್ಹ ನಡೆ. ಭಾಷೆಯ ವಿಚಾರದಲ್ಲಿ ದಿಟ್ಟ ನಿಲುವು ತಳೆಯಬೇಕಾದುದು ಇಂದಿನ ಅಗತ್ಯ. ಚುನಾಯಿತ ಪ್ರತಿನಿಧಿಗಳ ಬಹುಮುಖ್ಯ ಜವಾಬ್ದಾರಿಯೂ ಹೌದು. ಪಕ್ಷಭೇದ ಮರೆತು ಎಲ್ಲರೂ ಇದಕ್ಕೆ ಬೆಂಬಲವಾಗಿ ನಿಲ್ಲಬೇಕು.

ಕನ್ನಡದ ಬಳಕೆಯು ಬದುಕಿನ ಎಲ್ಲ ವಲಯಗಳಲ್ಲೂ ಹೆಚ್ಚಾಗಬೇಕು. ಗಡಿನಾಡು ಕನ್ನಡಿಗರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸವೂ ಆಗಬೇಕು. ನೇಮಕಾತಿಗಳಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ ಮಾಡುವುದರಿಂದ ಕನ್ನಡ ಕಲಿಕೆಗೆ ಒತ್ತಾಸೆ ಸಿಗುತ್ತದೆ. ಈ ದಿಸೆಯಲ್ಲಿ ಸರ್ಕಾರ ದೃಢ ಹೆಜ್ಜೆ ಇಡಬೇಕು.

– ಹುಸೇನಬಾಷಾ ತಳೇವಾಡ,ಹುಬ್ಬಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT