<p>ಬೆಂಗಳೂರಿನ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿರುವಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಚೆನ್ನೈನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲು ಅಲ್ಲಿನ ಒಂದು ಪಕ್ಷದ ರಾಜಕೀಯ ನಾಯಕರು, ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಶಶಿಕಲಾ ಪ್ರಯಾಣದ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಗಳನ್ನು ಸುರಿಯಲು ಅನುಮತಿ ಕೋರಿ ಮಾಜಿ ಶಾಸಕಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ರೀತಿ ಅದ್ಧೂರಿಯಾಗಿ ಸ್ವಾಗತಿಸುವ ಕಾರ್ಯ ಹೇಸಿಗೆ ತರುವಂಥದ್ದು.</p>.<p>ಈ ರಾಜಕೀಯ ನಾಯಕರು ಮುಂದಿನ ಪೀಳಿಗೆಗೆ ಏನು ಸಂದೇಶ ಕೊಡಲು ಹೊರಟಿದ್ದಾರೆ ಎಂಬುದನ್ನು ನೆನೆದರೆ ಆತಂಕ ಆಗುತ್ತದೆ. ಶಶಿಕಲಾ ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪ ಸಾಬೀತಾಗಿ ಜೈಲು ವಾಸ ಅನುಭವಿಸಿದವರು. ಅವರೇನೂ ಜನರಿಗಾಗಿ, ನ್ಯಾಯಕ್ಕಾಗಿ ಅಥವಾ ದೇಶಕ್ಕಾಗಿ ಹೋರಾಟ ಮಾಡಿ ಜೈಲು ಶಿಕ್ಷೆ ಅನುಭವಿಸಿದವರಲ್ಲ. ಅಂತಹ ವ್ಯಕ್ತಿಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತಿರುವ ಈ ಜನನಾಯಕರು, ತಾವು ಎಂತಹ ಮತಿಹೀನರು ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೈಲಿನಿಂದ ಬಿಡುಗಡೆ ಆಗುವವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಪರಿಪಾಟ ಹೆಚ್ಚುತ್ತಿದೆ. ಇದನ್ನು ತಡೆಗಟ್ಟುವ ಕೆಲಸ ನ್ಯಾಯಾಂಗದ ವತಿಯಿಂದ ಆಗಬೇಕಿದೆ.</p>.<p><strong>ವಿ.ತಿಪ್ಪೇಸ್ವಾಮಿ, ಹಿರಿಯೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿರುವಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಚೆನ್ನೈನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲು ಅಲ್ಲಿನ ಒಂದು ಪಕ್ಷದ ರಾಜಕೀಯ ನಾಯಕರು, ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಶಶಿಕಲಾ ಪ್ರಯಾಣದ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಗಳನ್ನು ಸುರಿಯಲು ಅನುಮತಿ ಕೋರಿ ಮಾಜಿ ಶಾಸಕಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ರೀತಿ ಅದ್ಧೂರಿಯಾಗಿ ಸ್ವಾಗತಿಸುವ ಕಾರ್ಯ ಹೇಸಿಗೆ ತರುವಂಥದ್ದು.</p>.<p>ಈ ರಾಜಕೀಯ ನಾಯಕರು ಮುಂದಿನ ಪೀಳಿಗೆಗೆ ಏನು ಸಂದೇಶ ಕೊಡಲು ಹೊರಟಿದ್ದಾರೆ ಎಂಬುದನ್ನು ನೆನೆದರೆ ಆತಂಕ ಆಗುತ್ತದೆ. ಶಶಿಕಲಾ ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪ ಸಾಬೀತಾಗಿ ಜೈಲು ವಾಸ ಅನುಭವಿಸಿದವರು. ಅವರೇನೂ ಜನರಿಗಾಗಿ, ನ್ಯಾಯಕ್ಕಾಗಿ ಅಥವಾ ದೇಶಕ್ಕಾಗಿ ಹೋರಾಟ ಮಾಡಿ ಜೈಲು ಶಿಕ್ಷೆ ಅನುಭವಿಸಿದವರಲ್ಲ. ಅಂತಹ ವ್ಯಕ್ತಿಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತಿರುವ ಈ ಜನನಾಯಕರು, ತಾವು ಎಂತಹ ಮತಿಹೀನರು ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೈಲಿನಿಂದ ಬಿಡುಗಡೆ ಆಗುವವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಪರಿಪಾಟ ಹೆಚ್ಚುತ್ತಿದೆ. ಇದನ್ನು ತಡೆಗಟ್ಟುವ ಕೆಲಸ ನ್ಯಾಯಾಂಗದ ವತಿಯಿಂದ ಆಗಬೇಕಿದೆ.</p>.<p><strong>ವಿ.ತಿಪ್ಪೇಸ್ವಾಮಿ, ಹಿರಿಯೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>