<p>ಪ್ರೌಢಶಾಲಾ ಶಿಕ್ಷಕರ ಕಾರ್ಯಕ್ಷಮತೆ ಪರೀಕ್ಷಿಸುವ ಸಲುವಾಗಿ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ರದ್ದು ಮಾಡಲು ಹಾಸನ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಶಿಕ್ಷಣ ಸಚಿವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.</p>.<p>ಹೊಸ ಪಠ್ಯಕ್ರಮಗಳಿಗೆ ಶಿಕ್ಷಕರು ಎಷ್ಟರಮಟ್ಟಿಗೆ ಹೊಂದಿಕೊಂಡಿದ್ದಾರೆ ಎಂದು ತಿಳಿಯುವ ಕ್ರಮಕ್ಕೆ ಇದು ಒಂದು ರೀತಿಯ ಹಿನ್ನಡೆಯಾಗಿದೆ. ಶಿಕ್ಷಕರು ‘ನಿರಂತರ ವಿದ್ಯಾರ್ಥಿ’ಗಳು. ಅವರು ಸದಾ ಕಲಿಯುತ್ತಿರಬೇಕಾದವರು.<br />ಹೊಸ ಹೊಸ ಬೋಧನಾ ವಿಧಾನಗಳು ಮತ್ತು ಕಲಿಕಾ ವಿಷಯಗಳನ್ನು ರೂಢಿಸಿಕೊಳ್ಳಬೇಕಾದವರು. ಇಂಥಶಿಕ್ಷಕರ ಕಾರ್ಯಕ್ಷಮತೆ ಪರೀಕ್ಷಿಸಲು ಪರೀಕ್ಷೆಯನ್ನು ನಡೆಸಿದರೆ ತಪ್ಪೇನು?</p>.<p>ಶಿಕ್ಷಕರ ಮೌಲ್ಯಮಾಪನ ಮಾಡಿ ಅವರನ್ನು ಕಲಿಕಾ ವಿಷಯಗಳ ಕಡೆಗೆ ಕರೆದುಕೊಂಡು ಹೋಗುತ್ತಿದ್ದ ಹಾಸನ ಜಿಲ್ಲಾಧಿಕಾರಿಯ ಪ್ರಯತ್ನಕ್ಕೆ ಸರ್ಕಾರ ಬ್ರೇಕ್ ಹಾಕಿರುವುದು ವಿಷಾದನೀಯ.</p>.<p>ಜಿಲ್ಲಾಧಿಕಾರಿ ಉದ್ದೇಶಿಸಿದಂತೆ, ಜುಲೈ 28 ರಂದು ಪರೀಕ್ಷೆ ನಡೆಸಲು ಅನುವು ಮಾಡಿಕೊಡುವುದರ ಮೂಲಕ ಸರ್ಕಾರವು ಹೊಸತನಕ್ಕೆ ನಾಂದಿ ಹಾಡಬೇಕು.</p>.<p><strong>ಲಕ್ಷ್ಮೀಕಾಂತರಾಜು ಎಂ.ಜಿ., ಮಠಗ್ರಾಮ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರೌಢಶಾಲಾ ಶಿಕ್ಷಕರ ಕಾರ್ಯಕ್ಷಮತೆ ಪರೀಕ್ಷಿಸುವ ಸಲುವಾಗಿ ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ರದ್ದು ಮಾಡಲು ಹಾಸನ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಶಿಕ್ಷಣ ಸಚಿವರು ವಿಧಾನಸಭೆಯಲ್ಲಿ ತಿಳಿಸಿದ್ದಾರೆ.</p>.<p>ಹೊಸ ಪಠ್ಯಕ್ರಮಗಳಿಗೆ ಶಿಕ್ಷಕರು ಎಷ್ಟರಮಟ್ಟಿಗೆ ಹೊಂದಿಕೊಂಡಿದ್ದಾರೆ ಎಂದು ತಿಳಿಯುವ ಕ್ರಮಕ್ಕೆ ಇದು ಒಂದು ರೀತಿಯ ಹಿನ್ನಡೆಯಾಗಿದೆ. ಶಿಕ್ಷಕರು ‘ನಿರಂತರ ವಿದ್ಯಾರ್ಥಿ’ಗಳು. ಅವರು ಸದಾ ಕಲಿಯುತ್ತಿರಬೇಕಾದವರು.<br />ಹೊಸ ಹೊಸ ಬೋಧನಾ ವಿಧಾನಗಳು ಮತ್ತು ಕಲಿಕಾ ವಿಷಯಗಳನ್ನು ರೂಢಿಸಿಕೊಳ್ಳಬೇಕಾದವರು. ಇಂಥಶಿಕ್ಷಕರ ಕಾರ್ಯಕ್ಷಮತೆ ಪರೀಕ್ಷಿಸಲು ಪರೀಕ್ಷೆಯನ್ನು ನಡೆಸಿದರೆ ತಪ್ಪೇನು?</p>.<p>ಶಿಕ್ಷಕರ ಮೌಲ್ಯಮಾಪನ ಮಾಡಿ ಅವರನ್ನು ಕಲಿಕಾ ವಿಷಯಗಳ ಕಡೆಗೆ ಕರೆದುಕೊಂಡು ಹೋಗುತ್ತಿದ್ದ ಹಾಸನ ಜಿಲ್ಲಾಧಿಕಾರಿಯ ಪ್ರಯತ್ನಕ್ಕೆ ಸರ್ಕಾರ ಬ್ರೇಕ್ ಹಾಕಿರುವುದು ವಿಷಾದನೀಯ.</p>.<p>ಜಿಲ್ಲಾಧಿಕಾರಿ ಉದ್ದೇಶಿಸಿದಂತೆ, ಜುಲೈ 28 ರಂದು ಪರೀಕ್ಷೆ ನಡೆಸಲು ಅನುವು ಮಾಡಿಕೊಡುವುದರ ಮೂಲಕ ಸರ್ಕಾರವು ಹೊಸತನಕ್ಕೆ ನಾಂದಿ ಹಾಡಬೇಕು.</p>.<p><strong>ಲಕ್ಷ್ಮೀಕಾಂತರಾಜು ಎಂ.ಜಿ., ಮಠಗ್ರಾಮ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>