ಕರ್ನಾಟಕ ರಾಜ್ಯೋತ್ಸವದ ಪ್ರಶಸ್ತಿ ಮೊತ್ತವನ್ನು ರಾಜ್ಯ ಸರ್ಕಾರವು ₹ 1 ಲಕ್ಷದಿಂದ ₹ 5 ಲಕ್ಷಕ್ಕೆ ಏರಿಸಿರುವುದೇನೊ ಸರಿ. ಆದರೆ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ರಾಜ್ಯೋತ್ಸವದ ನಿಮಿತ್ತ ಗೌರವಿಸಲಾಗುವ ವಿವಿಧ ಕ್ಷೇತ್ರಗಳ ಸಾಧಕರಿಗೆ ಕನಿಷ್ಠ ಪ್ರಶಸ್ತಿ ಮೊತ್ತವನ್ನೂ ನೀಡದೆ ಶಾಲು, ಪೇಟ, ಹಾರ, ಹಣ್ಣು, ಪ್ರಶಸ್ತಿ ಪತ್ರ, ಸ್ಮರಣಿಕೆಯನ್ನಷ್ಟೇ ನೀಡಿ ಕೈ ತೊಳೆದುಕೊಳ್ಳುತ್ತಿರುವುದು ಎಷ್ಟರಮಟ್ಟಿಗೆ ಸರಿ?