ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರಿನಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳ ಲಿದ್ದ ಮುಖ್ಯಮಂತ್ರಿಯನ್ನು ನೋಡಲು ಬಂದ ಬಾಲಕನ ತಲೆಗೆ ಪೊಲೀಸ್ ಸಿಬ್ಬಂದಿಯೊಬ್ಬರು ಟೋಪಿಯಿಂದ (ಟೋಪಿಯಲ್ಲಿರುವ ಲೋಹ) ಹೊಡೆದಿದ್ದು ಬಾಲಕನ ತಲೆಗೆ ಗಾಯವಾಗಿದೆ. ಕರ್ತವ್ಯದ ಹೆಸರಲ್ಲಿ ಸಾರ್ವಜನಿಕರ ಮೇಲೆ ಪೊಲೀಸರ ದೌರ್ಜನ್ಯ ಇಂದು-ನಿನ್ನೆಯದಲ್ಲ. ಆಗಾಗ್ಗೆ ಇಂತಹ ದುರ್ಘಟನೆಗಳಿಗೆ ಸಾಕ್ಷಿಯಾಗುತ್ತಿರುವ ಪೊಲೀಸ್ ಇಲಾಖೆ ಹೇಗೆ ತಾನೆ ಸಾರ್ವಜನಿಕರ ವಿಶ್ವಾಸ ಗಳಿಸಲು ಸಾಧ್ಯ? ಅಧಿಕಾರ, ಸಮವಸ್ತ್ರ, ಕೈಯಲ್ಲಿ ಲಾಠಿ ಇದೆ ಎಂದು ಏನು ಬೇಕಾದರೂ ಮಾಡಬಹುದೇ?